ಶಿವಮೊಗ್ಗ ಕ್ಷೇತ್ರದ ಬಿಜೆಪಿ ನೂತನ ಸಂಸದ ಬಿ.ವೈ.ರಾಘವೇಂದ್ರ ಜಲಸಂಪನ್ಮೂಲಕ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. 

ಬೆಂಗಳೂರು : ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಕೈ ನಾಯಕ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರಿನಲ್ಲಿ ಡಿಕೆಶಿ ಭೇಟಿ ಮಾಡಿದ ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಘೋಷಣೆಯಾದ ಒಟ್ಟು 6 ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಕೋರಿದರು. 

ಅಗತ್ಯ ಅನುದಾನ ಬಿಡುಗಡೆ ಜೊತೆಗೆ ಕೂಡಲೇ ಟೆಂಡರ್ ಗೆ ಆಹ್ವಾನಿಸಿ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಬಳಿ ರಾಘವೇಂದ್ರ ಮನವಿ ಮಾಡಿದರು.

Scroll to load tweet…