ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ
ಶಿವಮೊಗ್ಗ ಕ್ಷೇತ್ರದ ಬಿಜೆಪಿ ನೂತನ ಸಂಸದ ಬಿ.ವೈ.ರಾಘವೇಂದ್ರ ಜಲಸಂಪನ್ಮೂಲಕ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಬೆಂಗಳೂರು : ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಕೈ ನಾಯಕ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಬೆಂಗಳೂರಿನಲ್ಲಿ ಡಿಕೆಶಿ ಭೇಟಿ ಮಾಡಿದ ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಘೋಷಣೆಯಾದ ಒಟ್ಟು 6 ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಕೋರಿದರು.
ಅಗತ್ಯ ಅನುದಾನ ಬಿಡುಗಡೆ ಜೊತೆಗೆ ಕೂಡಲೇ ಟೆಂಡರ್ ಗೆ ಆಹ್ವಾನಿಸಿ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಬಳಿ ರಾಘವೇಂದ್ರ ಮನವಿ ಮಾಡಿದರು.
ಈ ದಿವಸ ಮಾನ್ಯ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಶ್ರೀ ಡಿ.ಕೆ.ಶಿವಕುಮಾರ್ ರವರನ್ನ ಬೇಟಿ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯವ್ಯಯದಲ್ಲಿ ಘೋಷಣೆಯಾದ ಒಟ್ಟು 6 ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ ಕೂಡಲೇ ಟೆಂಡರ್ ಆಹ್ವಾನಿಸಿ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದೆ. pic.twitter.com/CuZNjVXDMV
— B Y Raghavendra (@BYRBJP) June 5, 2019