ಜಮೀರ್ ಅಹಮದ್ ಅವರು ಇದೀಗ ಮಂಡ್ಯ ಉಪ ಚುನಾವಣೆ ಬಗ್ಗೆ ಭವಿಷ್ಯವನ್ನು ನುಡಿದಿದ್ದು, ಅಭ್ಯರ್ಥಿ ಹೆಚ್ಚಿನ ಬಹುಮತದಿಂದ ಮುನ್ನಡೆ ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ. 

ಮಂಡ್ಯ: ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಶಿವರಾಮೇಗೌಡ ಅವರು ಕನಿಷ್ಠ 6 - 7 ಲಕ್ಷ ಬಹು ಮತದಿಂದ ಆಯ್ಕೆಯಾಗುತ್ತಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದು ನನ್ನ ಲೆಕ್ಕಾಚಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮಂಡ್ಯದಲ್ಲಿ ಬಿಜೆಪಿ ಮತ ಗಳಿಕೆ 1 ಲಕ್ಷವನ್ನೂ ದಾಟಲ್ಲ ಎಂದು ತಿಳಿಸಿದರು. 

ಸಂಹಿತೆ ಉಲ್ಲಂಘನೆ?: ಅಪಘಾತದಲ್ಲಿ ಮೃತಪಟ್ಟ ಮುಸ್ಲಿಂ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಜಮೀರ್ ಅವರು ಮಂಡ್ಯದಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ 3 ಲಕ್ಷ ರು. ನೆರವು ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಕಳೆದ ವಾರ ಮಂಡ್ಯಕ್ಕೆ ಭೇಟಿ
ನೀಡಿದ್ದಾಗ ಸಚಿವರು ಧನಸಹಾಯ ಮಾಡುತ್ತಿರುವ ಫೋಟೋ ವೈರಲ್ ಆಗಿದೆ.