ಲೋಕಸಭಾ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮನ್ನು ಭೇಟಿ ಮಾಡಿದ ಮಾರನೇ ದಿನವೇ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ, ಬಿಜೆಪಿಯನ್ನು ಕಟುವಾಗಿ ಟೀಕಿಸಿ ದ್ದಾರೆ. ಇದೆಲ್ಲವೂ ಪೂರ್ಣ ನಾಟಕ ಎಂದು ಕಿಡಿಕಾರಿದ್ದಾರೆ.
ಮುಂಬೈ/ ಪಾಲ್ಘಾರ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮನ್ನು ಭೇಟಿ ಮಾಡಿದ ಮಾರನೇ ದಿನವೇ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ, ಬಿಜೆಪಿಯನ್ನು ಕಟುವಾಗಿ ಟೀಕಿಸಿ ದ್ದಾರೆ. ಇದೆಲ್ಲವೂ ಪೂರ್ಣ ನಾಟಕ ಎಂದು ಕಿಡಿಕಾರಿದ್ದಾರೆ. ಪಾಲ್ಘಾರ್ನಲ್ಲಿ ಪಕ್ಷದ ಕಾರ್ಯಕರ್ತರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಪಾಲ್ಘಾರ್ ನಲ್ಲಿ ಪಕ್ಷದ ಸೋಲಿಗೆ ಪ್ರತಿಕ್ರಿಯಿಸಿದ ಅವರು, ಒಂದು ಉಪಚುನಾ ವಣೆ ಗೆಲ್ಲಲು ಬಿಜೆಪಿ ಏನೇನು ಮಾಡಬೇಕೋ ಅದನ್ನೆಲ್ಲಾ ಮಾಡಿತು ಎಂದು ಪರೋಕ್ಷವಾಗಿ ಇವಿಎಂಗಳ ಅಸಮರ್ಪಕ ಕಾರ್ಯನಿರ್ವಹಣೆ ಯನ್ನು ಪ್ರಸ್ತಾಪಿಸಿದರು.
ಈ ನಡುವೆ 2019ರ ಲೋಕಸಭಾ ಚುನಾ ವಣೆಯಲ್ಲಿ ಏಕಾಂಗಿಯಾಗಿಯೇ ಸ್ಪರ್ಧಿಸು ವುದಾಗಿ ಶಿವಸೇನೆ ಸ್ಪಷ್ಟಪಡಿಸಿದೆ.