ಹೊಸ ಪಕ್ಷ ಕಟ್ಟಲಿದ್ದಾರಾ ಶಿವಪಾಲ್ ಯಾದವ್?
ಅಧಿಕಾರಕ್ಕಾಗಿ ಹೋರಾಟ ನಡೆಸಿ ಕೈ ಸುಟ್ಟುಕೊಂಡ ಸಮಾಜವಾದಿ ಪಕ್ಷದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಶಿವಪಾಲ್ ಯಾದವ್ ಹೊಸ ಪಕ್ಷ ಕಟ್ಟವುದಾಗಿ ಘೋಷಿಸಿದ್ದಾರೆ.
ಲಕ್ನೋ (ಜ.31): ಅಧಿಕಾರಕ್ಕಾಗಿ ಹೋರಾಟ ನಡೆಸಿ ಕೈ ಸುಟ್ಟುಕೊಂಡ ಸಮಾಜವಾದಿ ಪಕ್ಷದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಶಿವಪಾಲ್ ಯಾದವ್ ಹೊಸ ಪಕ್ಷ ಕಟ್ಟವುದಾಗಿ ಘೋಷಿಸಿದ್ದಾರೆ.
ಉತ್ತರ ಪ್ರದೇಶ ಚುನಾವಣಾ ಫಲಿತಾಂಶ ಮಾರ್ಚ್ 11 ರಂದು ಪ್ರಕಟವಾಗಲಿದೆ. ಫಲಿತಾಂಶ ಪ್ರಕಟವಾದ ಬಳಿಕ ನಾವು ಹೊಸ ಪಕ್ಷ ಕಟ್ಟಲಿದ್ದೇವೆ ಎಂದು ಶಿವಪಾಲ್ ಯಾದವ್ ಹೇಳಿದ್ದಾರೆ.
ನಾನು ಎಸ್ಪಿ-ಕಾಂಗ್ರೆಸ್ ಮೈತ್ರಿಯನ್ನು ಖಂಡಿಸುತ್ತೇನೆ. ಹಾಗಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ ಎಂದು ಶಿವಪಾಲ್ ಯಾದವ್ ಹೇಳಿದ್ದಾರೆ.