ಮೋದಿ ಒಬ್ಬ ಹೇಡಿಯೆಂದು ನಾನು ಹೇಳಿದಕ್ಕೆ ಅವರ ಬೆಂಬಲಿಗರು ಇಂದು ನನ್ನ ಮೇಲೆ ಶೂ ಎಸೆದಿದ್ದಾರೆ. ಮೋದಿಜಿಯವರೇ, ನಾವು ಕೂಡಾ ಆ ರೀತಿ ಮಾಡಬಹುದು, ಆದರೆ ನಮ್ಮ ಸಂಸ್ಕಾರ ಅದಕ್ಕೆ ಅನುಮತಿಸುವುದಿಲ್ಲ. ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ರೊಹ್ತಕ್ (ಜ.01): ಸಾರ್ವಜನಿಕ ಸಭೆಯೊಂದನ್ನುದ್ದೇಶಿ ಮಾತನಾಡುತ್ತಿದ್ದ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಯುವಕನೋರ್ವ ಶೂ ಎಸೆದ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred

ಆದರೆ ಎಸೆದ ಶೂ ಕೇಜ್ರಿವಾಲ್'ವರೆಗೆ ತಲುಪದೆ ವೇದಿಕೆ ಮೇಲೆ ಬಿದ್ದಿದೆ.

ಘಟನೆಗೆ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಶೂ ಎಸೆತಕ್ಕೆ ಪ್ರಧಾನಿ ನರೇಂಧ್ರ ಮೋದಿಯವರನ್ನು ಹೊಣೆಗಾರರನ್ನಾಗಿಸಿದ್ದಾರೆ.

Scroll to load tweet…
Scroll to load tweet…

ಮೋದಿ ಒಬ್ಬ ಹೇಡಿಯೆಂದು ನಾನು ಹೇಳಿದಕ್ಕೆ ಅವರ ಬೆಂಬಲಿಗರು ಇಂದು ನನ್ನ ಮೇಲೆ ಶೂ ಎಸೆದಿದ್ದಾರೆ. ಮೋದಿಜಿಯವರೇ, ನಾವು ಕೂಡಾ ಆ ರೀತಿ ಮಾಡಬಹುದು, ಆದರೆ ನಮ್ಮ ಸಂಸ್ಕಾರ ಅದಕ್ಕೆ ಅನುಮತಿಸುವುದಿಲ್ಲ. ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಸಿಬಿಐ ದಾಳಿ ಅಥವಾ ಶೂ ಎಸೆತದ ಹೊರತಾಗಿಯೂ ನಾನು ನೋಟು ಅಮಾನ್ಯ ಕ್ರಮ ಹಾಗೂ ಸಹಾರಾ-ಬಿರ್ಲಾ ಹಗರಣಗಳನ್ನು ಬಯಲಿಗೆಳೆಯುತ್ತೇನೆ, ಎಂದು ಅವರು ಹೇಳಿದ್ದಾರೆ.