ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಬ್ಲಡ್ ಚೆಕ್ ಅಪ್ ಸೇರಿದಂತೆ ರೆಗ್ಯೂಲರ್ ಚೆಕ್ ಅಪ್ ಮಾಡಲಾಗುವುದು. ಬ್ಲಡ್ ರಿಪೋರ್ಟ್ ಬಂದ ಬಳಿಕ ಮುಂದಿನ ಚಿಕಿತ್ಸೆ ನೀಡಲಾಗಿದೆ.  ಬಿಜಿಎಸ್ ಆಸ್ಪತ್ರೆಯ ಹಿರಿಯ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡಲಿದೆ ಎಂದು ಡಾ. ರವೀಂದ್ರ ಹೇಳಿದ್ದಾರೆ. 

ತುಮಕೂರು (ಜೂ. 21):  ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

Add Asianetnews Kannada as a Preferred SourcegooglePreferred

ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ಲಡ್ ಚೆಕ್ ಅಪ್ ಸೇರಿದಂತೆ ರೆಗ್ಯೂಲರ್ ಚೆಕ್ ಅಪ್ ಮಾಡಲಾಗುವುದು. ಬ್ಲಡ್ ರಿಪೋರ್ಟ್ ಬಂದ ಬಳಿಕ ಮುಂದಿನ ಚಿಕಿತ್ಸೆ ನೀಡಲಾಗಿದೆ. ಬಿಜಿಎಸ್ ಆಸ್ಪತ್ರೆಯ ಹಿರಿಯ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡಲಿದೆ ಎಂದು ಡಾ. ರವೀಂದ್ರ ಹೇಳಿದ್ದಾರೆ. 

ಶ್ರೀಗಳು ಆಸ್ಪತ್ರೆಗೆ ಬರಲು ಒಪ್ಪಲಿಲ್ಲ. ಅವರ ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಜನರಲ್ ಚೆಕ್ ಅಪ್ ನ ವರದಿ ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಜನವರಿಯಲ್ಲಿ ಮೂರು ಸ್ಟಂಟ್ ಅಳವಡಿಕೆ ಮಾಡಲಾಗಿತ್ತು. ಒಟ್ಟು ಅವರ ದೇಹದಲ್ಲಿ 8 ಸ್ಟಂಟ್ ಗಳಿವೆ. ಒಂದು ಸ್ಟಂಟ್'ನ ಅವಧಿ ಕೇವಲ ಆರು ತಿಂಗಳು ಹೀಗಾಗಿ ಸ್ಟಂಟ್ ನ ಕಾರ್ಯವೈಖರಿ ಬಗ್ಗೆ ತಪಾಸಣೆ ಮಾಡಲಾಗುವುದು. ಆ ಬಳಿಕ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಡಾ. ರವೀಂದ್ರ ಹೇಳಿದ್ದಾರೆ.