Asianet Suvarna News Asianet Suvarna News

ದಶಕದ ಬಳಿಕ ಒಂದಾಗಲಿದ್ದಾರೆ ಗುರು ಶಿಷ್ಯರು!

ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವರಿಷ್ಠರು ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಶನಿವಾರ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

Siddaramaiah And HD Devegowda To Hold Joint Press Meet
Author
Bengaluru, First Published Oct 20, 2018, 11:15 AM IST

ಬೆಂಗಳೂರು :  ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವರಿಷ್ಠರು ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಶನಿವಾರ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಮೂಲಕ ಸುಮಾರು ದಶಕದ ಬಳಿಕ ಎಚ್‌.ಡಿ. ದೇವೇಗೌಡ ಹಾಗೂ ಸಿದ್ದರಾಮಯ್ಯ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ ದೇವೇಗೌಡರ ಜತೆಗಿದ್ದ ವೇಳೆ ಸಿದ್ದರಾಮಯ್ಯ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸುತ್ತಿದ್ದರು. 

ಇದಾ​ದ ನಂತರ ಉಭಯ ನಾಯ​ಕರು ಒಗ್ಗೂಡಿ ನಡೆ​ಸು​ತ್ತಿ​ರುವ ಮೊದಲ ಪತ್ರಿ​ಕಾ​ಗೋಷ್ಠಿ ಇದಾ​ಗಿದೆ. ನಗರದ ಅಶೋಕ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಜೆಡಿಎಸ್‌, ಕಾಂಗ್ರೆಸ್‌ನ ಹಿರಿಯ ಮುಖಂಡರು ಸಹ ಭಾಗವಹಿಸಲಿದ್ದಾರೆ.

Follow Us:
Download App:
  • android
  • ios