Asianet Suvarna News Asianet Suvarna News

ಆಪರೇಷನ್ ಕಮಲಕ್ಕೆ ಗುದ್ದು ನೀಡಲು ಸಿದ್ದು ಎಂಟ್ರಿ!

ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಚರ್ಚೆ ಕಾವೇರುತ್ತಿರುವ ಬೆನ್ನಲ್ಲೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್​ ಮುಂದಾಗಿದೆ. ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲು ಖುದ್ದು ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರ ಹೆಗಲಿಗೆ ಹಾಕಿದ್ದಾರೆ. 

Siddaramaiah calls Congress MLAS meeting on Sept 25
Author
Bengaluru, First Published Sep 22, 2018, 12:33 PM IST

ಬೆಂಗಳೂರು, [ಸೆ.22]: ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಚರ್ಚೆ ಕಾವೇರುತ್ತಿರುವ ಬೆನ್ನಲ್ಲೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್​ ಮುಂದಾಗಿದೆ.

ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲು ಖುದ್ದು ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರ ಹೆಗಲಿಗೆ ಹಾಕಿದ್ದಾರೆ. 

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರಲ್ಲಿ ಎದ್ದಿರುವ ಅಸಮಾಧಾನವನ್ನು ತಣ್ಣಗಾಗಿಸಲು ಸಿದ್ದು ಅಖಾಡಕ್ಕೆ ಇಳಿದಿದ್ದಾರೆ.  ಸಿದ್ದರಾಮಯ್ಯ ಅವರು ಇದೇ ಸೆಪ್ಟೆಂಬರ್​ 25 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. 

ನಗರದ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಶಾಸಕರನ್ನು ಪಕ್ಷದಲ್ಲಿಯೇ ಹಿಡಿದಿಟ್ಟುಕೊಳ್ಳುವ ಕುರಿತು ಸಿದ್ದರಾಮಯ್ಯ ಅವರು ಮಾಸ್ಟರ್​ ಪ್ಲಾನ್ ಮಾಡಿದ್ದಾರೆ. ​ 

ಪ್ರಸ್ತುತ ನಡೆದಿರುವರಾಜಕೀಯ ಬೆಳವಣಿಗೆ ಬಗ್ಗೆ ಸಲಹೆಗಳನ್ನ ಪಡೆಯಲು ಸ್ವತಃ ಕುಮಾರಸ್ವಾಮಿ ಅವರೇ  ಶುಕ್ರವಾರ  ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಹಲವು ಮಹತ್ವದ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದರು.

Follow Us:
Download App:
  • android
  • ios