ಒಂದು ಕಡೆ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ಇನ್ನಿಲ್ಲ ಕಸರತ್ತು ನಡೆಸಿದರೆ, ಮತ್ತೊಂದೆಡೆ  ಮೈತ್ರಿ ಸರ್ಕಾರದ ಸ್ಥಿರತೆಗೆ ಎದುರಾಗಿರುವ 'ಗಂಡಾಂತರ' ತಪ್ಪಿಸಲು ರಾಜ್ಯ ಜೆಡಿಎಸ್- ಕಾಂಗ್ರೆಸ್ ನಾಯಕರು ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದು, ಬಿಜೆಪಿ ನಡೆಗೆ ಸಿದ್ದು ಕೆಂಡಕಾರಿದ್ದಾರೆ. 

ಬೆಂಗಳೂರು, (ಮೇ.30): ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯರಾಜಕಾರಣ ರಂಗೇರಿದ್ದು, ಮೈತ್ರಿ ಸರ್ಕಾರ ತೂಗುಯ್ಯಾಲೆಯಲ್ಲಿ ಸಿಲುಕಿದೆ.

Add Asianetnews Kannada as a Preferred SourcegooglePreferred

ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಶತಾಯಗತಾಯವಾಗಿ ಅಸ್ಥಿರಗೊಳಿಸಲು ರಾಜ್ಯ ಬಿಜೆಪಿ ಶಕ್ತಿ ಮೀರಿ ಪ್ರಯತ್ನ ನಡೆಸಿದೆ. ಇದ್ರಿಂದ ಆತಂಕಗೊಂಡಿರುವ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದಿಡೀರ್ ಸರಣಿ ಟ್ವೀಟ್‌ಗಳನ್ನು ಮಾಡಿರುವುದನ್ನು ಗಮನಿಸಿದರೆ ಸಿದ್ದರಾಮಯ್ಯ ಅವರು ಎಲ್ಲೋ ಒಂದು ಕಡೆ ಮೈತ್ರಿ ಸರ್ಕಾರ ಬಗ್ಗೆ ಆತಂಕದಲ್ಲಿದ್ದಾರೆ ಎನ್ನುವುದು ಕಂಡುಬರುತ್ತಿದೆ. ಹಾಗಾದ್ರೆ ಸಿದ್ದು ಮಾಡಿದ ಸರಣಿ ಟ್ವೀಟ್ ಈ ಕೆಳಗಿನಂತಿವೆ.

Scroll to load tweet…
Scroll to load tweet…
Scroll to load tweet…