ಇಂದಿನ ರಾಜಕಾರಣದಲ್ಲಿ ಯಾವುದೇ ರೀತಿಯ ಬದ್ಧತೆ ಇಲ್ಲ  ಸಿದ್ದರಾಮಯ್ಯ ಅವರು ಇತ್ತೀಚಿನ ರಾಜಕಾರಣದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಪರೋಕ್ಷವಾಗಿ ಮೈತ್ರಿ ಸರ್ಕಾರದ ಬಗ್ಗೆ ಟಾಂಗ್ ನೀಡಿದ್ದಾರೆ. 

ಬೆಂಗಳೂರು : ಇಂದಿನ ದಿನಗಳಲ್ಲಿ ಬದ್ಧತೆ ಇಲ್ಲದ ರಾಜಕಾರಣ ಮೇಳೈಸುತ್ತಿದ್ದು, ರಾಜರು ಭಿಕಾರಿಗಳಾಗುತ್ತಿದ್ದಾರೆ, ಭಿಕಾರಿಗಳು ರಾಜ ರಾಗುತ್ತಿದ್ದಾರೆ. ಮೌಲ್ಯಾಧಾರಿತ ರಾಜಕಾರಣ ಹೊರಟುಹೋಗುತ್ತಿದ್ದು, ರಾಜಕೀಯ ಚಾಣಾಕ್ಷತನವೂ ಕ್ಷೀಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ನಗರದ ಪುರಭವನದಲ್ಲಿ ಶುಕ್ರವಾರ ಮಾಜಿ ಸಚಿವ ದಿ. ಬಿ.ಎ. ಮೊಹಿದೀನ್ ಅವರ ‘ನನ್ನೊಳಗಿನ ನಾನು’ ಆತ್ಮಕಥೆಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ಆತ್ಮಕಥೆಯಲ್ಲಿನ ತುಣುಕುಗಳನ್ನು ಉಲ್ಲೇಖಿಸಿ ಪ್ರಸ್ತುತ ರಾಜಕಾರಣದ ಬಗ್ಗೆ ಅರ್ಥಗರ್ಭಿತವಾಗಿ ಮಾತನಾಡಿದ ಸಿದ್ದರಾಮಯ್ಯ ಈ ಮೂಲಕ ಮೈತ್ರಿ ಸರ್ಕಾರದ ನಡವಳಿಕೆ ಬಗ್ಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಮೊಹಿದೀನ್ ಅವರು ಮುಸ್ಲಿಮ್ ಆಗಿ ಜನಿಸಿದರೂ ಎಲ್ಲ ವರ್ಗಗಳಿಗೆ ಜನನಾಯಕರಾಗಿದ್ದರು ಎಂದು ಮೆಚ್ಚಿಕೊಂಡರು.