ಪ್ರಶಸ್ತಿ ಬೇಡವೆಂದು ಪ್ರಧಾನಿಗೆ ಪತ್ರ ಬರೆದ ಸಿದ್ಧೇಶ್ವರ ಶ್ರೀ
ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ವಿಜಯಪುರದ ಜ್ಞಾನಯೋಗಾಶ್ರಮ ಸಿದ್ಧೇಶ್ವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ತಮಗೆ ಪ್ರಶಸ್ತಿ ಬೇಡವೆಂದು ಮನವಿ ಮಾಡಿದ್ದಾರೆ.
ವಿಜಯಪುರ : ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ವಿಜಯಪುರದ ಜ್ಞಾನಯೋಗಾಶ್ರಮ ಸಿದ್ಧೇಶ್ವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ತಮಗೆ ಪ್ರಶಸ್ತಿ ಬೇಡವೆಂದು ಮನವಿ ಮಾಡಿದ್ದಾರೆ.
ಈ ಪ್ರಶಸ್ತಿ ನೀಡಿದ್ದಕ್ಕೆ ಧನ್ಯವಾದಗಳು, ಆದರೆ ಇಂತಹ ಪ್ರಶಸ್ತಿಗಳನ್ನು ಬೇರೆ ಬೇರೆ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಸಾಧಕರಿಗೆ ನೀಡಿ ಗೌರವಿಸಿ ಎಂದು ಪತ್ರದಲ್ಲಿ ಹೇಳಿದ್ದಾರೆ.
ಅಲ್ಲದೇ ತಾವೊಬ್ಬ ಸಾಮಾನ್ಯ ಆಧ್ಯಾತ್ಮಿಕ ಜೀವಿ. ಅದಕ್ಕಾಗಿ ಈ ಪ್ರಶಸ್ತಿ ಹಿಂದಿರುಗಿಸುತ್ತಿದ್ದೇನೆ. ತಾವುಗಳು ಅನ್ಯಥಾ ತಪ್ಪು ಭಾವಿಸಬೇಡಿ ಶುಭಂ ಎಂದು ಹೇಳಿ ಸಹಿ ಮಾಡಿ ಪ್ರಧಾನಿಗೆ ಪತ್ರ ರವಾನಿಸಿದ್ದಾರೆ.