ಸಿದ್ಧಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಮುಕ್ತಾಯಗೊಂಡಿದ್ದು,  ಶ್ರೀಗಳಿಗೆ ಸ್ಟಂಟ್ ಅಳವಡಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ಬೆಂಗಳೂರು (ಜ.26): ಸಿದ್ಧಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಮುಕ್ತಾಯಗೊಂಡಿದ್ದು, ಶ್ರೀಗಳಿಗೆ ಸ್ಟಂಟ್ ಅಳವಡಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರ ನೇತೃತ್ವದಲ್ಲಿ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆಸುವಲ್ಲಿ ವೈದ್ಯರು ​ಯಶಸ್ವಿಯಾಗಿದ್ದಾರೆ. ಈಗ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಶ್ರೀಗಳಿಗೆ ಈಗಾಗಲೇ 4 ನೇ ಬಾರಿ ಸ್ಟಂಟ್ ಅಳವಡಿಸಲಾಗಿದೆ. ಇದೀಗ 5 ನೇ ಬಾರಿಗೆ ಸ್ಟಂಟ್ ಅಳವಡಿಕಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ಈ ಬಾರಿ ಪಿತ್ತನಾಳದಲ್ಲಿ ಸ್ಟಂಟ್ ಅಳವಡಿಸಲಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ವಿಶೇಷ ವಾರ್ಡ್​ಗೆ ಶ್ರೀಗಳನ್ನು ಶಿಫ್ಟ್​ ಮಾಡಲಾಗಿದೆ. ​

ಇಂದು ಒಂದು ದಿನ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಶನಿವಾರ ಅಥವಾ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.