ರೆಸಾರ್ಟ್ ನಲ್ಲಿಯೇ ಉಳಿದುಕೊಂಡಿದ್ದ ಕಾಂಗ್ರೆಸ್ ಶಾಸಕರೊಬ್ಬರು ನೈಟ್ ಡ್ರೆಸ್ ನಲ್ಲಿಯೇ ಎಸ್ಕೇಪ್ ಆಗಿದ್ದಾರೆ. ಸಿನಿಮೀಯ ರೀತಿಯಲ್ಲಿ ಶಿಡ್ಲುಘಟ್ಟ ಶಾಸಕ ಮುನಿಯಪ್ಪ ಎಸ್ಕೇಪ್  ಆಗಿದ್ದಾರೆ. ಈಗ ಮುನಿಯಪ್ಪ ಎಲ್ಲಿಗೆ ಹೋಗಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.

ಬೆಂಗಳೂರು[ಜು. 17] ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ ರೆಸಾರ್ಟ್ ನಿಂದ ಎಸ್ಕೇಪ್ ಆಗಿದ್ದಾರೆ ಎಂಬ ಸುದ್ದಿ ಬ್ರೇಕ್ ಆಗಿದೆ. ನೈಟ್ ಡ್ರೆಸ್ ನಲ್ಲಿಯೇ ಮುನಿಯಪ್ಪ ಹೊರಹೋಗಿದ್ದು ಅತೃಪ್ತರ ಬಣ ಸೇರ್ತಾರಾ? ಅಥವಾ ಹಿಂದಕ್ಕೆ ಬರುತ್ತಾರಾ? ಎಂಬ ಪ್ರಶ್ನೆ ಎದ್ದಿದೆ.

Add Asianetnews Kannada as a Preferred SourcegooglePreferred

ಬಂಗಾರಪೇಟೆ ಶಾಸಕ ಎಸ್‌.ಎನ್.ನಾರಾಯಣಸ್ವಾಮಿ ರೆಸಾರ್ಟ್ ನಿಂದ ಹೊರಹೋಗಲು ಯತ್ನ ಮಾಡಿದ್ದು ಕಾಂಗ್ರೆಸ್ ಕಾರ್ಯಕರ್ತರು ಅಡ್ಡ ಹಾಕಿದ್ದಾರೆ. ಇಲ್ಲೆ ಹೋಗಿ ಬರ್ತೆನೆ ಬಿಡ್ರಪ್ಪಾ ಅಂದರು ಕಾರ್ಯಕರ್ತರು ಮಾತು ಕೇಳಿತ್ತಿಲ್ಲ. ಗೇಟ್ ನಿಂದಲೇ ಶಾಸಕರನ್ನು ಹಿಂದಕ್ಕೆ ಕಳಿಸಿದ್ದಾರೆ.

ಸರ್ಕಾರ ಉಳಿಸಲು ಕೊನೆ ಕ್ಷಣದಲ್ಲಿ ಗೌಡರ ಅದ್ಭುತ ಪ್ಲ್ಯಾನ್, ಸಲಹೆ ಕೊಟ್ಟ ಮಾಸ್ಟರ್ ಮೈಂಡ್

ರಾಜಕೀಯ ವಾತಾವರಣದ ಬಿಸಿ ಏರಿರುವುದರಿಂದ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮೂರು ಪಕ್ಷದ ಶಾಸಕರು ಬೇರೆ ಬೇರೆ ರೆಸಾರ್ಟ್ ಗಳಲ್ಲಿ ವಾಸ್ತವ್ಯ ಹೂಡಿದ್ದರೆ ರಾಜೀನಾಮೆ ಕೊಟ್ಟಿರುವ ಅತೃಪ್ತ ಶಾಸಕರು ಮುಂಬೈನಲ್ಲಿ ಠಿಕಾಣಿ ಹೂಡಿದ್ದಾರೆ. ನಾಳೆ ಅಂದರೆ ಗುರುವಾರ ಸಿಎಂ ಕುಮಾರಸ್ವಾಮಿ ದೋಸ್ತಿಗಳ ಪರವಾಗಿ ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈಗಾಗಲೇ ಅಲ್ಪ ಮತದ ಆತಂಕ ಎದುರಿಸುತ್ತಿರುವ ಸರಕಾರಕ್ಕೆ ಇದೀಗ ಮುನಿಸ್ವಾಮಿ ಶಾಕ್ ನೀಡಿದ್ದಾರೆ.