ಸೂರ್ಯನೊಡ್ಡಿದ ಸವಾಲು ಸ್ವೀಕರಿಸಿದ ಸರ್ದಾರ್‌ಜೀ| ಸುಡುವ ದೆಹಲಿ ರಸ್ತೆಯಲ್ಲಿ ಸರ್ದಾರ್ ಜೀ ನೀರಿನ ಸ್ಕೂಟರ್ | ಬಿಸಿಲಿನಿಂದ ಬಳಲಿ ಬೆಂಡಾದವರಿಗೆ ನೀರು ಕೊಡುವ ತಾತ| ರಾಷ್ಟ್ರ ರಾಜಧಾನಿ ಜನರ ಮನೆ ಮಾತಾದ ಸಿಖ್ ತಾತ| ಸ್ಕೂಟರ್‌ನಲ್ಲಿ ನೀರು ತಂದು ಬಾಯಾರಿಕೆ ತಣಿಸುವ ಸರ್ದಾರ್‌ಜೀ| ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆದ ತಾತ| 

ನವದೆಹಲಿ(ಜೂ.06): ರಾಷ್ಟ್ರ ರಾಜಧಾನಿ ನವದೆಹಲಿ ಅಕ್ಷರಶಃ ಕಾದ ಕೆಂಡವಾಗಿದೆ. 45 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ತಾಪಮಾನದಿಂದಾಗಿ ಜನ ಕಂಗಾಲಾಗಿದ್ದಾರೆ.

Add Asianetnews Kannada as a Preferred SourcegooglePreferred

ಆದರೆ ಸುಡುವ ಊರಲ್ಲೋರ್ವ ಸರ್ದಾರ್‌ಜೀ ತಾತ ಮಾತ್ರ ಬಿಸಿಲಿನಿಂದ ಬಳಲುವ ಜನರಿಗೆ ನೀರು ವಿತರಿಸುತ್ತಾ ಸೂರ್ಯನೊಡ್ಡಿದ ಸವಾಲನ್ನು ಸ್ವೀಕರಿಸಿದ್ದಾರೆ.

Scroll to load tweet…

ಹೌದು, ರಾಷ್ಟ್ರ ರಾಜಧಾನಿಯಲ್ಲಿ ಇದೀಗ ಎಲ್ಲಿ ನೋಡಿದರೂ ಈ ಸಿಖ್ ತಾತನದ್ದೇ ಮಾತು. ರಸ್ತೆಯ ಬದಿಯಲ್ಲಿ ಬೈಕ್ ನಿಲ್ಲಿಸಿ ಬಿಸಲಿನಲ್ಲಿ ಊರು ಸುತ್ತುವ ಜನರನ್ನು ತಡೆದು ಒಂದು ಗ್ಲಾಸ್ ನೀರು ಕೊಡುತ್ತಾರೆ ಈ ತಾತ.

ಬಸ್ಸುಗಳಲ್ಲಿ ಓಡಡುವ ಪ್ರಯಾಣಿಕರು ಮತ್ತು ಪಾದಚಾರಿಗಳಿಗೆ ನೀರು ವಿತರಿಸುವ ಈ ತಾತ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದಾರೆ.

Scroll to load tweet…

ಟ್ವಿಟ್ಟರ್‌ನಲ್ಲಿ ನೀರು ವಿತರಿಸುವ ತಾತನ ವಿಡಿಯೋಗೆ 6 ಸಾವಿರಕ್ಕೂ ಅಧಿಕ ಲೈಕ್ಸ್ ಸಿಕ್ಕಿದ್ದು, 3 ಸಾವಿರಕ್ಕೂ ಅಧಿಕ ಬಾರಿ ರಿಟ್ವೀಟ್ ಮಾಡಲಾಗಿದೆ.