ಸೂರ್ಯನೊಡ್ಡಿದ ಸವಾಲು ಸ್ವೀಕರಿಸಿದ ಸರ್ದಾರ್‌ಜೀ| ಸುಡುವ ದೆಹಲಿ ರಸ್ತೆಯಲ್ಲಿ ಸರ್ದಾರ್ ಜೀ ನೀರಿನ ಸ್ಕೂಟರ್ | ಬಿಸಿಲಿನಿಂದ ಬಳಲಿ ಬೆಂಡಾದವರಿಗೆ ನೀರು ಕೊಡುವ ತಾತ| ರಾಷ್ಟ್ರ ರಾಜಧಾನಿ ಜನರ ಮನೆ ಮಾತಾದ ಸಿಖ್ ತಾತ| ಸ್ಕೂಟರ್‌ನಲ್ಲಿ ನೀರು ತಂದು ಬಾಯಾರಿಕೆ ತಣಿಸುವ ಸರ್ದಾರ್‌ಜೀ| ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆದ ತಾತ| 

ನವದೆಹಲಿ(ಜೂ.06): ರಾಷ್ಟ್ರ ರಾಜಧಾನಿ ನವದೆಹಲಿ ಅಕ್ಷರಶಃ ಕಾದ ಕೆಂಡವಾಗಿದೆ. 45 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ತಾಪಮಾನದಿಂದಾಗಿ ಜನ ಕಂಗಾಲಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ಸುಡುವ ಊರಲ್ಲೋರ್ವ ಸರ್ದಾರ್‌ಜೀ ತಾತ ಮಾತ್ರ ಬಿಸಿಲಿನಿಂದ ಬಳಲುವ ಜನರಿಗೆ ನೀರು ವಿತರಿಸುತ್ತಾ ಸೂರ್ಯನೊಡ್ಡಿದ ಸವಾಲನ್ನು ಸ್ವೀಕರಿಸಿದ್ದಾರೆ.

Scroll to load tweet…

ಹೌದು, ರಾಷ್ಟ್ರ ರಾಜಧಾನಿಯಲ್ಲಿ ಇದೀಗ ಎಲ್ಲಿ ನೋಡಿದರೂ ಈ ಸಿಖ್ ತಾತನದ್ದೇ ಮಾತು. ರಸ್ತೆಯ ಬದಿಯಲ್ಲಿ ಬೈಕ್ ನಿಲ್ಲಿಸಿ ಬಿಸಲಿನಲ್ಲಿ ಊರು ಸುತ್ತುವ ಜನರನ್ನು ತಡೆದು ಒಂದು ಗ್ಲಾಸ್ ನೀರು ಕೊಡುತ್ತಾರೆ ಈ ತಾತ.

ಬಸ್ಸುಗಳಲ್ಲಿ ಓಡಡುವ ಪ್ರಯಾಣಿಕರು ಮತ್ತು ಪಾದಚಾರಿಗಳಿಗೆ ನೀರು ವಿತರಿಸುವ ಈ ತಾತ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದಾರೆ.

Scroll to load tweet…

ಟ್ವಿಟ್ಟರ್‌ನಲ್ಲಿ ನೀರು ವಿತರಿಸುವ ತಾತನ ವಿಡಿಯೋಗೆ 6 ಸಾವಿರಕ್ಕೂ ಅಧಿಕ ಲೈಕ್ಸ್ ಸಿಕ್ಕಿದ್ದು, 3 ಸಾವಿರಕ್ಕೂ ಅಧಿಕ ಬಾರಿ ರಿಟ್ವೀಟ್ ಮಾಡಲಾಗಿದೆ.