ಏಕಕಾಲಕ್ಕೆ ಚುನಾವಣೆ : ಮಹತ್ವದ ಸಭೆ ಕರೆದ ಆಯೋಗ
ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾಪದ ಕುರಿತು ಮುಂದಿನ ವಾರ ಮೇ 16 ರಂದು ಮಹತ್ವದ ಸಭೆ ನಡೆಯಲಿದೆ.
ನವದೆಹಲಿ: ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾಪದ ಕುರಿತು ಮುಂದಿನ ವಾರ ಮೇ 16 ರಂದು ಮಹತ್ವದ ಸಭೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಓಂಪ್ರಕಾಶ್ ರಾವತ್ ಈ ಸಭೆ ಕರೆದಿದ್ದು, ಕಾನೂನು ಆಯೋಗದ ಮುಖ್ಯಸ್ಥ ನ್ಯಾ| ಬಿ.ಎಸ್.ಚೌಹಾಣ್ ಸೇರಿ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗಷ್ಟೆ ಕಾನೂನು ಆಯೋಗವು ಏಕಕಾಲಕ್ಕೆ ಚುನಾವಣೆ ನಡೆಸುವುದಾದರೆ ಏನೇನು ಬದಲಾವಣೆಯಾಗ ಬೇಕು ಎಂಬ ಬಗ್ಗೆ ವರದಿ ನೀಡಿದ್ದ ಬೆನ್ನಲ್ಲೇ ಈ ಸಭೆ ನಿಗದಿಯಾಗಿದೆ.