ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ವಿಚಾರಣೆಯನ್ನು ಎಸ್​ಐಟಿ ಅಧಿಕಾರಿಗಳು ನಡೆಸಿದ್ದಾರೆ. 

ಬೆಂಗಳೂರು (ಸೆ.28): ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ವಿಚಾರಣೆಯನ್ನು ಎಸ್​ಐಟಿ ಅಧಿಕಾರಿಗಳು ನಡೆಸಿದ್ದಾರೆ.

ಇಂದ್ರಜಿತ್ ಲಂಕೇಶ್ ಆಪ್ತನಾಗಿರುವ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಗೌರಿ ಲಂಕೇಶ್ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಹೀಗಾಗಿ ಗೌರಿ ಲಂಕೇಶ್ ಅವರಿಗೆ ಚಕ್ರವರ್ತಿ ಚಂದ್ರಚೂಡ್ ಬೆದರಿಕೆ ಹಾಕಿದ್ದರಂತೆ. ಈ ಸಂಬಂಧ ನಿನ್ನೆ ದಿನವಿಡೀ ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಹಲವು ನಕಲಿ ಫೇಸ್ ಬುಕ್ ಖಾತೆ ಹೊಂದಿದ್ದ ಚಕ್ರವರ್ತಿ ಚಂದ್ರಚೂಡ್, ನಕಲಿ ಖಾತೆಗಳ ಮೂಲಕ ಗೌರಿ ಲಂಕೇಶ್ ಗೆ ಬೆದರಿಕೆ ಹಾಕಿದ್ದರು.