ಆರು ಸಂಸದರು ಸದನದ ಬಾಗಿಗೆ ನುಗ್ಗಿ ಕಡತಗಳನ್ನು ಹರಿದು ಸ್ಪೀಕರ್ ಅವರತ್ತ ಎಸೆದು ದಾಂಧಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾಧ್ಯಕ್ಷೆ ಈ ಶಿಸ್ತುಕ್ರಮ ಜಾರಿಗೊಳಿಸಿದ್ದಾರೆ.

ನವದೆಹಲಿ(ಜುಲೈ 24): ಲೋಕಸಭೆಯ ಘನತೆಗೆ ಚ್ಯುತಿ ಬರುವಂತೆ ವರ್ತಿಸಿದ ಆರೋಪದ ಮೇಲೆ 6 ಮಂದಿ ಕಾಂಗ್ರೆಸ್ ಸಂಸದರನ್ನು ಲೋಕಸಭಾ ಸ್ಪೀಕರ್ ಅಮಾನತು ಮಾಡಿದ್ದಾರೆ. ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಗೌರವ್ ಗೊಗೋಯ್, ಕೆ.ಸುರೇಶ್, ಅಧೀರ್ ರಾಜನ್ ಚೌಧುರಿ, ರಂಜೀತ್ ರಂಜನ್, ಸುಷ್ಮಿತಾ ದೇವ್ ಮತ್ತು ಎಂಕೆ ರಾಘವನ್ ಅವರನ್ನು 5 ದಿನಗಳ ಕಾಲ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲೋಕಸಭೆಯಲ್ಲಿ ಗೋಮಾರಾಟಗಾರರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣದ ವಿಚಾರವಾಗಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಆಡಳಿತ ಪಕ್ಷವು ಬೋಫೋರ್ಸ್ ಹಗರಣವನ್ನು ಪ್ರತ್ಯಸ್ತ್ರವಾಗಿ ಬಳಸಿದೆ. ಇದರಿಂದ ಆಕ್ರೋಶಗೊಂಡ ಈ ಆರು ಸಂಸದರು ಸದನದ ಬಾಗಿಗೆ ನುಗ್ಗಿ ಕಡತಗಳನ್ನು ಹರಿದು ಸ್ಪೀಕರ್ ಅವರತ್ತ ಎಸೆದು ದಾಂಧಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾಧ್ಯಕ್ಷೆ ಈ ಶಿಸ್ತುಕ್ರಮ ಜಾರಿಗೊಳಿಸಿದ್ದಾರೆ.