ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದೇ ವೇಳೆ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಪ್ರಸಾದ ನೀಡಿದರು.

ಬೆಂಗಳೂರು [ಜು.27]: ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ತಮ್ಮ ಜೇಬಿನಿಂದ ಕವರ್‌ವೊಂದನ್ನು ತೆಗೆದು ಕೊಟ್ಟಿದ್ದೇನು ಎಂಬ ಕುತೂಹಲ ಕೆರಳಿಸಿತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಾಜಿನಮನೆಗೆ ಆಗಮಿಸಿದ ಯಡಿಯೂರಪ್ಪ ಅವರೊಂದಿಗೆ ಮಾತನಾಡಿ ಹಸ್ತಲಾಘವ ಮಾಡಿದ ಎಸ್.ಎಂ.ಕೃಷ್ಣ ತಾವು ತಂದಿದ್ದ ಪುಟ್ಟ ಕವರೊಂದನ್ನು ಜೇಬಿನಿಂದ ತೆಗೆದು ನೀಡಿದ್ದು ನೋಡುಗರ ಗಮನ ಸೆಳೆಯಿತು. 

ಯಡಿಯೂರಪ್ಪ ಅವರಿಗೆ ನೀಡಿದ್ದು ದೇವರ ಪ್ರಸಾದ ಎಂದು ಹೇಳಲಾಗಿದೆ. ಮೈಸೂರಿನ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇಗುಲಕ್ಕೆ ತಮ್ಮ ಕುಟುಂಬ ಸಮೇತ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು ಎಂದು ಹೇಳಲಾಗಿದೆ. ಹೀಗಾಗಿ ಅದನ್ನೇ ಕೊಟ್ಟರು ಎನ್ನಲಾಗಿದೆ