ಇಂದು ಮಲ್ಪೆ ತೀರದಲ್ಲಿ ನಮೋ ಭಾರತ್‌ ಸಂಘಟನೆಯಿಂದ ಪಾಂಚಜನ್ಯ ಸಮಾವೇಶ | ಸ್ಮೃತಿ ಇರಾನಿ ಹಾಗೂ ಮೀನಾಕ್ಷಿ ಲೇಖಿ ಭೇಟಿ | ಸಮಾವೇಶಕ್ಕೂ ಮೊದಲು ಸಂಜೆ 4 ಗಂಟೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಮಲ್ಪೆಯವರೆಗೆ ಬೈಕ್‌ ರ್ಯಾಲಿ ನಡೆಯಲಿದೆ  

ಉಡುಪಿ (ಮಾ. 03): ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದಕ್ಕಾಗಿ ಮತ ಚಲಾಯಿಸುವಂತೆ ಜನತೆಗೆ ಮನವಿ ಮಾಡುವುದಕ್ಕಾಗಿ ಮಾ.3ರಂದು ಮಲ್ಪೆ ತೀರದಲ್ಲಿ ನಮೋ ಭಾರತ್‌ ಸಂಘಟನೆಯಿಂದ ಪಾಂಚಜನ್ಯ ಸಮಾವೇಶ ಆಯೋಜಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂಜೆ 5.30ಕ್ಕೆ ಆರಂಭವಾಗುವ ಈ ಸಮಾವೇಶದಲ್ಲಿ ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಮತ್ತು ಬಿಜೆಪಿಯ ರಾಷ್ಟ್ರೀಯ ವಕ್ತಾರರಾದ ಮೀನಾಕ್ಷಿ ಲೇಖಿ ಮುಖ್ಯ ಅತಿಥಿಗಳಾಗಿರುವರು. ಸಮಾವೇಶಕ್ಕೂ ಮೊದಲು ಸಂಜೆ 4 ಗಂಟೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಮಲ್ಪೆಯವರೆಗೆ ಬೈಕ್‌ ರ್ಯಾಲಿ ನಡೆಯಲಿದೆ.

ಇದೇ ವೇಳೆಯಲ್ಲಿ ಮಲ್ಪೆ ವೇದಿಕೆಯಲ್ಲಿ ಸ್ವರ ಭಾರತಿ ಎಂಬ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ. 5 ಗಂಟೆಗೆ ವಡಬಾಂಡೇಶ್ವರಕ್ಕೆ ಆಗಮಿಸಲಿರುವ ಅತಿಥಿಗಳನ್ನು ಪಾದಯಾತ್ರೆಯ ಮೂಲಕ ಮಲ್ಪೆ ತೀರಕ್ಕೆ ಬರಮಾಡಿಕೊಳ್ಳಲಾಗುವುದು. ನಂತರ ಸಾರ್ವಜನಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಮಾವೇಶದಲ್ಲಿ ಸುಮಾರು 20 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ನಮೋ ಭಾರತ್‌ ರಾಜಕೀಯೇತರ ಸಂಘಟನೆಯಾಗಿದ್ದು, ಪ್ರಸಕ್ತ ಪರಿಸ್ಥಿತಿಯನ್ನು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ದೇಶಕ್ಕೆ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಮೋ ಭಾರತ್‌ ಸಂಘಟನೆ ಮಿಶನ್‌ 365 ಪ್ಲಸ್‌ ಎಂಬ ಅಭಿಯಾನವನ್ನು ನಡೆಸುತ್ತಿದ್ದು, ಅದರಂಗವಾಗಿ ಈ ಸಮಾವೇಶ ನಡೆಸಲಾಗುತ್ತಿದೆ ಎಂದು ಸಂಚಾಲಕ ಶಶಾಂಕ್‌ ಶಿವತ್ತಾಯ ತಿಳಿಸಿದ್ದಾರೆ.