ವೆಂಕಯ್ಯ ರಾಜೀನಾಮೆ: ಸ್ಮೃತಿಗೆ ವಾರ್ತಾ & ಪ್ರಸಾರ; ತೋಮರ್’ಗೆ ನಗರಾಭಿವೃದ್ಧಿ
ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಅವರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ವಾರ್ತೆ & ಪ್ರಸಾರ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಜವಳಿ ಸಚಿವೆ ಸ್ಮೃತಿ ಇರಾನಿ ಅವರಿಗೆ ನೀಡಲಾಗಿದೆ.
ನವದೆಹಲಿ: ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಅವರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ವಾರ್ತೆ & ಪ್ರಸಾರ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಜವಳಿ ಸಚಿವೆ ಸ್ಮೃತಿ ಇರಾನಿ ಅವರಿಗೆ ನೀಡಲಾಗಿದೆ.
ಎನ್’ಡಿಎಯಿಂದ ಉಪ-ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲಿರುವ ವೆಂಕಯ್ಯ ನಾಯ್ಡು ಕೇಂದ್ರ ಸಚಿವ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಯ್ಡು ಸಚಿವರಾಗಿದ್ದ ನಗರಾಭಿವೃದ್ಧಿ ಇಲಾಖೆಯನ್ನು ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿಯಾಗಿ ವಹಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.