ಅಮೇಥಿಯಲ್ಲಿ ರಾಹುಲ್ ವಿರುದ್ಧ ಗೆದ್ದ ಸ್ಮೃತಿ ಇರಾನಿ| ಗೆಲುವಿನ ಬೆನ್ನಲ್ಲೇ ಸಿದ್ಧಿ ವಿನಾಯಕನ ದರ್ಶನ ಪಡೆದ ಸೂತನ ಸಂಸದೆ| ಎಲ್ಲಾ ಭಗವಂತನ ಇಚ್ಛೆ 14. ಕಿ.ಮೀಟರ್ ಕಾಲ್ನಡಿಗೆ ಬಳಿಕ ಸ್ಮೃತಿ ಇರಾನಿ ಮಾತು

ಮುಂಬೈ[ಮೇ.29]: ಅಮೇಥಿಯಿಂದ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಸ್ಮೃತಿ ಇರಾನಿ ತಮ್ಮ ಮನೆಯಿಂದ 14 ಕಿ. ಮೀ ದೂರಲ್ಲಿರುವ ಮುಂಬೈನ ಸಿದ್ಧಿ ವಿನಾಯಕ ಮಂದಿರಕ್ಕೆ ಕಾಲ್ನಡಿಗೆಯಲ್ಲೇ ತೆರಳಿ ಹರಕೆ ತೀರಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಮೃತಿ ಇರಾನಿಯೊಂದಿಗೆ ಅವರ ಗೆಳತಿ ಹಾಗೂ ಖ್ಯಾತ ಬಾಲಿವುಡ್ ನಿರ್ದೆಶಕಿ ಏಕ್ತಾ ಕಪೂರ್ ಕೂಡಾ ಇದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ಧಿ ವಿನಾಯಕ ಮಂದಿರಕ್ಕೆ ಕಾಲ್ನಡಿಗೆಯಲ್ಲಿ ತಲುಪಿದ ಬಳಿಕ ಸ್ಮೃತಿ ಇರಾನಿ ಜೊತೆ ತೆಗೆದ ಸೆಲ್ಫೀಯೊಂದನ್ನು ಶೇರ್ ಮಾಡಿಕೊಂಡಿರುವ ಏಕ್ತಾ ಕಪೂರ್ '14 ಕಿ. ಮೀಟರ್ ನಡೆದು ಸಿದ್ಧಿ ವಿನಾಯಕನ ಬಳಿ ತಲುಪಿದ ಬಳಿಕದ ಗ್ಲೋ' ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ 'ಇದು ಭಗವಂತನ ಇಚ್ಛೆ, ಭಗವಂತ ಕರುಣಾಮಯಿ' ಎಂದಿದ್ದಾರೆ.

View post on Instagram

ಏಪ್ರಿಲ್ 23ರಂದು ಹೊರದಬಿದ್ದ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅಮೇಥಿಯಿಂದ ಕಣಕ್ಕಿಳಿದಿದ್ದ ಸ್ಮೃತಿ ಇರಾನಿ, ತನ್ನ ಎದುರಾಳಿಯಾಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಸೋಲಿಸಿದ್ದರು.