ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುವ ಸ್ವರೂಪ್‌, ಕಳೆದ ವರ್ಷ ‘ಡೇಂಜರ್‌ ಝೋನ್‌' ಎಂಬ ಕನ್ನಡ ಚಲನಚಿತ್ರ ನಿರ್ಮಿಸಿದ್ದರು. ಈ ಚಿತ್ರಕ್ಕೆ ಅವರ ಗೆಳೆಯ ರಾಮು ಸಹ ಹಣ ಹೂಡಿದ್ದರು. ಆದರೆ, ಚಿತ್ರ ತೆರೆಕಂಡಷ್ಟೆ ವೇಗವಾಗಿ ಚಿತ್ರಮಂದಿರಗಳಿಂದ ಎತ್ತಂಗಡಿ'ಯಾಗಿತ್ತು. ಸಿನಿಮಾದ ಸೋಲಿನಿಂದ ಬೇಸರಗೊಂಡ ರಾಮು, ತಾನು ಹೂಡಿದ್ದ ಹಣ ಮರಳಿಸುವಂತೆ ನಿರ್ಮಾಪಕನನನ್ನು ಆಗ್ರಹಿಸಿದ್ದರು. ಇದಕ್ಕೆ ಆಕ್ಷೇಪಿಸಿದ ಸ್ವರೂಪ, ಯಾವುದೇ ಕಾರಣಕ್ಕೂ ಬಿಡಿಗಾಸು ಸಹ ಹಿಂದಿ ರುಗಿಸುವುದಿಲ್ಲ ಎಂದಿದ್ದರು. ಈ ಹಣಕಾಸು ವಿಷಯ ವಾಗಿ ಹಲವು ಬಾರಿ ಅವರ ನಡುವೆ ಗಲಾಟೆಯಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.