ಸುಮಾರು 7 ಲಕ್ಷ ರೂ. ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ತಂದೆ ಮಳೆಬೆಳೆ ಇಲ್ಲದೆ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ

ಚಿತ್ರದುರ್ಗ[ಜೂ.20]: ಅಪ್ಪನ ಆತ್ಮಹತ್ಯೆಯಿಂದ ನೊಂದ ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಲಂಬಾಣಿಹಟ್ಟಿಯಲ್ಲಿ‌ ನಡೆದಿದೆ.

Add Asianetnews Kannada as a Preferred SourcegooglePreferred

ವೆಂಕಟೇಶ್ (22) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತನನ್ನು ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಲಬಾಧೆ ಹಿನ್ನಲೆಯಲ್ಲಿ ನಿನ್ನೆ ರೈತ ರಾಮನಾಯ್ಕ (60)ಆತ್ಮಹತ್ಯೆಗೆ ಶರಣಾಗಿದ್ದರು.

ನಿನ್ನೆ ಜಮೀನಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಸುಮಾರು 7 ಲಕ್ಷ ಕೈ ಸಾಲ ಮಾಡಿ ಕೊಳವೆ ಬಾವಿ ಕೊರೆಸಿದ್ದು ವಿಫಲವಾಗಿತ್ತು. ಮಳೆ- ಬೆಳೆ ಇಲ್ಲದೆ ಸಾಲ ತೀರಿಸುವ ಚಿಂತೆಗೀಡಾಗಿದ್ದರು ರಾಮನಾಯ್ಕ್. ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.