ಉಡುಪಿ (ಸೆ.19): ಉದ್ಯಮಿ ಭಾಸ್ಕರಶೆಟ್ಟಿ ಹೋಮಕುಂಡ ಹತ್ಯೆ ಪ್ರಕರಣದಲ್ಲಿ ಸಿಐಡಿ ಮಹತ್ವದ ತನಿಖೆ ಆರಂಭಿಸಿದೆ. ಇದೇ ಮೊದಲ ಬಾರಿಗೆ ಪ್ರಧಾನ ಆರೋಪಿ ಪುತ್ರ ನವನೀತನನ್ನು ವಶಕ್ಕೆ ಪಡೆದಿದೆ.

Add Asianetnews Kannada as a Preferred SourcegooglePreferred

ಇಂದು ಉಡುಪಿ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ವಾದ ಮಂಡಿಸಿದ ಆರೋಪಿ ಪರ ವಕೀಲರು, ನವನೀತ ಅಸ್ತಮಾ ರೋಗಿಯಾಗಿದ್ದಾನೆ. ಹೀಗಾಗಿ ಸಿಐಡಿ ವಶಕ್ಕೆ ನೀಡಬಾರದೆಂದು ಮನವಿ ಮಾಡಿದರು. 

ಈ ವಾದಕ್ಕೆ ನ್ಯಾಯಾಲಯ ಮನ್ನಣೆ ನೀಡಲಿಲ್ಲ. ಎರಡು ದಿನಗಳ ತನಿಖೆಗೆ ನವನೀತನನ್ನು ಸಿಐಡಿ ವಶಕ್ಕೆ ನೀಡಲಾಗಿದೆ. ಇಂದು ರಾಜೇಶ್ವರಿ ಹಾಗೂ ಸಾಕ್ಷ್ಯ ನಾಶ ಮಾಡಿದ ಶ್ರೀನಿವಾಸ ಭಟ್ಟ ಹಾಗೂ ರಾಘವೇಂದ್ರನಿಗೆ ಅಕ್ಟೋಬರ್ 3 ರವೆರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.