ಡಿ. ಕೆ ಶಿವಕುಮಾರ್ ಬಂಧನ| ಡಿ.ಕೆ. ಸುರೇಶ್‌ಗೆ ಫೋನ್‌ ಮಾಡಿ ಧೈರ್ಯ ತುಂಬಿದ ಸೋನಿಯಾ| 

ನವದೆಹಲಿ[ಸೆ.06]: ಡಿ.ಕೆ.ಶಿವಕುಮಾರ್‌ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು, ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಸಂಸದ ಡಿ.ಕೆ ಸುರೇಶ್‌ ಅವರಿಗೆ ದೂರವಾಣಿ ಕರೆ ಮಾಡಿ ಧೈರ್ಯ ತುಂಬಿದ್ದಾರೆ.

Add Asianetnews Kannada as a Preferred SourcegooglePreferred

ಗುರುವಾರ ಸಂಸದ ಡಿ.ಕೆ.ಶಿವಕುಮಾರ್‌ ಅವರ ಸಹೋದರರೂ ಆಗಿರುವ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರ ಆರೋಗ್ಯ, ಮಾನಸಿಕ ಸ್ಥಿತಿಗತಿ ಕುರಿತು ಮಾಹಿತಿ ಪಡೆದಿದ್ದಾರೆ.

ED ಕುಣಿಕೆಯಲ್ಲಿ ಡಿಕೆಶಿ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸುಮಾರು ಮೂರು ನಿಮಿಷಗಳ ಕಾಲ ಮಾತನಾಡಿದ ಸೋನಿಯಾ ಅವರು ‘ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ. ಈ ಸಮಯದಲ್ಲಿ ನಾವೆಲ್ಲರೂ ಅವರ ಜತೆ ಇದ್ದೇವೆ’ ಎಂದು ಧೈರ್ಯ ತುಂಬಿದ್ದಾರೆ. ಈ ವಿಚಾರವನ್ನು ಸ್ವತಃ ಡಿ.ಕೆ.ಸುರೇಶ್‌ ಅವರೇ ತಿಳಿಸಿದ್ದಾರೆ.