ಸಂಜೆ ಅಥವಾ ರಾತ್ರಿಯ ವೇಳೆಗೆ ಸರ್ಕಾರ ಈ ಬಗ್ಗೆ ಆದೇಶ ಪ್ರಕಟಿಸಲಿದೆ. ಇನ್ನು ಮೂವರು ಹೆಚ್ಚುವರಿ ಪೊಲೀಸ್ ಆಯುಕ್ತರುಗಳೂ ವರ್ಗವಾವಣೆಯಾಗಲಿದ್ದಾರೆ.
ಬೆಂಗಳೂರು ಪೊಲೀಸ್ ಕಮೀಷನರೇಟ್ನಲ್ಲಿ ಬಾರೀ ಬಲಾವಣೆಯಾಗಲಿದೆ. ಹೋಸ ವರ್ಷಕ್ಕೆ ಹೊಸ ಪೊಲೀಸ್ ಆಯುಕ್ತರು ಬರಲಿದ್ದಾರೆ. ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ವರ್ಗಾವಣೆಯಾಗಲಿದ್ದು, ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ನೂತನ ಪೊಲೀಸ್ ಆಯುಕ್ತರಾಗಲಿದ್ದಾರೆ. ಈ ಮೂಲಕ ಒಂದು ವರ್ಷ ಎಂಟು ತಿಂಗಳ ಕಾಲ ನಗರ ಪೊಲೀಸ್ ಆಯುಕ್ತರಾಗಿದ್ದ ಎನ್ ಎಸ್ ಮೇಘರಿಕ್ ವರ್ಗವಾಗಲಿದ್ದಾರೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಸರ್ಕಾರ ಈ ಬಗ್ಗೆ ಆದೇಶ ಪ್ರಕಟಿಸಲಿದೆ. ಇನ್ನು ಮೂವರು ಹೆಚ್ಚುವರಿ ಪೊಲೀಸ್ ಆಯುಕ್ತರುಗಳೂ ವರ್ಗವಾವಣೆಯಾಗಲಿದ್ದಾರೆ. ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ವರ್ಗಾವಣೆಯಾಗಲಿದ್ದು ಮಂಗಳೂರು ಪೊಲೀಸ್ ಕಮೀಷನರ್ ಹುದ್ದೆಗೆ ವರ್ಗಾವಣೆಯಾಗಲಿದ್ದಾರೆ. ಪೂರ್ವ ವಿಭಾಗಕ್ಕೆ ಬಿ.ಕೆ ಸಿಂಗ್ ಹೆಚ್ಚುವರಿ ಪೊಲೀಸ್ ಆಯುಕ್ತರಾಗಲಿದ್ದಾರೆ. ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಚರಣ್ ರೆಡ್ಡಿ ವರ್ಗವಾಗಲಿದ್ದು ಅವರ ಜಾಗಕ್ಕೆ ಐಪಿಎಸ್ ಅಧಿಕಾರಿ ಮಾಲಿನಿ ಕೃಷ್ಣ ಮೂರ್ತಿ ಬರಲಿದ್ದಾರೆ. ಇನ್ನು ಅಪರಾಧ ವಿಭಾಗದ ಹೆಚ್ಚುವರಿ ಆಯುಕ್ತ ಶರತ್ ಚಂದ್ರ ವರ್ಗಾವಣೆಯಾಗಲಿದ್ದು ಅವರ ಜಾಗಕ್ಕೆ ಎಸ್. ರವಿ ಬರಲಿದ್ದಾರೆ. ಜೊತೆಗೆ ಕೇಂದ್ರ ವಿಭಾಗ ಮತ್ತು ಪೂರ್ವ ವಿಭಾಗದ ಡಿಸಿಪಿಗಳು ವರ್ಗಾವಣೆಯಾಗಲಿದ್ದಾರೆ. ಈ ಬಗ್ಗೆ ಸಂಜೆಯ ವೇಳೆಗೆ ಸರ್ಕಾರ ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.
