Asianet Suvarna News Asianet Suvarna News

ರಾಜ್ಯ ಸರ್ಕಾರದಿಂದ ಮತ್ತೊಂದು ಭರ್ಜರಿ ಗಿಫ್ಟ್‌!

ಮುಖ್ಯಮಂತ್ರಿ ಕುಮಾರಸ್ವಾಮಿ ಶೀಘ್ರದಲ್ಲೇ ರಾಜ್ಯದ ಜನರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಿದ್ದಾರೆ. ಗಣೇಶ ಚತುರ್ಥಿ ವೇಳೆಗೆ ಬಂಪರ್ ಕೊಡುಗೆಯೊಂದನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ. 

Soon CM Kumaraswamy Will Give Good News
Author
Bengaluru, First Published Aug 10, 2018, 9:48 AM IST

ಬೆಂಗಳೂರು :  ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ದಿನ ಅಥವಾ ಗಣೇಶ ಚತುರ್ಥಿಗೆ ಮತ್ತೊಂದು ಸಿಹಿ ಸುದ್ದಿ ನೀಡುತ್ತೇನೆ. ಎಲ್ಲರೂ ಕಾತುರದಿಂದ ಕಾಯುತ್ತಿರಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸಾಲ ಮನ್ನಾ ಅಷ್ಟೇ ಅಲ್ಲದೆ ರೈತರು ಹಾಗೂ ಜನ ಸಾಮಾನ್ಯರನ್ನು ಖುಷಿಪಡಿಸುವ ನಿಟ್ಟಿನಲ್ಲಿ ಮತ್ತೊಂದು ಉಡುಗೊರೆ ನೀಡಲು ಮುಂದಾಗಿದ್ದೇನೆ.

ಸಾಧ್ಯವಾದರೆ ಇದೇ ಸ್ವಾತಂತ್ರ್ಯ ದಿನಾಚರಣೆಗೆ ಘೋಷಿಸಲಾಗುವುದು. ತಪ್ಪಿದರೆ, ಗಣೇಶ ಚತುರ್ಥಿಗೆ ಉಡುಗೊರೆ ನೀಡಲಾಗುವುದು ಎಂದು ಹೇಳಿದರು. ಈ ವೇಳೆ ಯಾವ ವಿಚಾರಕ್ಕೆ ಹಾಗೂ ಫಲಾನುಭವಿಗಳು ಯಾರು ಎಂಬ ಬಗ್ಗೆ ವಿವರಣೆ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು.

Follow Us:
Download App:
  • android
  • ios