ಕುಳಿತುಕೊಳ್ಳುವ ಜಾಗದ ವಿಷಯಕ್ಕೆ 2 ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಪಿಯುಸಿ ವಿದ್ಯಾರ್ಥಿಗಳು ಹರ್ಷನನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ.

ಬೆಂಗಳೂರು(ಫೆ.27): ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆಯಲ್ಲಿ ಎಸ್'ಎಸ್ಎಲ್'ಸಿ ವಿದ್ಯಾರ್ಥಿಯೊಬ್ಬ ಕೊಲೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿದ್ಯಾರ್ಥಿ ಹರ್ಷ' ಕೊಲೆಯಾಗಿರುವ ವಿದ್ಯಾರ್ಥಿ.ಯಲಹಂಕದ ಸಂಯುಕ್ತ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ನಡೆಯುತ್ತಿದ್ದ ವೇಳೆ ಕುಳಿತುಕೊಳ್ಳುವ ಜಾಗದ ವಿಷಯಕ್ಕೆ 2 ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಪಿಯುಸಿ ವಿದ್ಯಾರ್ಥಿಗಳು ಹರ್ಷನನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.