Asianet Suvarna News Asianet Suvarna News

ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರರಾಗಿ ಪ್ರೋ.ರಂಗಪ್ಪ: ನೇಮಕಕ್ಕೆ ಹಿಂದೇಟು ಯಾಕೆ?

ಉನ್ನತ ಶಿಕ್ಷಣ ಇಲಾಖೆಗೆ ಪ್ರೋ.ರಂಗಪ್ಪ ನೇಮಕ ವಿಚಾರ

ನಿರ್ಧಾರದಿಂದ ಹಿಂದೆ ಸರಿದ ಹೆಚ್.ಡಿ.ಕುಮಾರಸ್ವಾಮಿ

ಬಿಜೆಪಿ ವಿರೋಧದ ಹಿನ್ನೆಲೆಯಲ್ಲಿ ನೇಮಕಕ್ಕೆ ಹಿಂದೇಟು

ಬೆಂಗಳೂರು(ಜೂ.21): ಉನ್ನತ ಶಿಕ್ಷಣ ಇಲಾಖೆಯ ಸಲಹೆಗಾರರಾಗಿ ಪ್ರೋ. ರಂಗಪ್ಪ ಅವರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಬಜೆಟ್ ಆಗುವ ತನಕ ಪ್ರೋ.ರಂಗಪ್ಪ ಅವರನ್ನು ಸಲಹೆಗಾರರನ್ನಾಗಿ ನೇಮಕ ಮಾಡದಿರಲು ನಿರ್ಧಾರಿಸಲಾಗಿದೆ.

ಪ್ರೋ. ರಂಗಪ್ಪ ಅವರನ್ನು ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರರನ್ನಾಗಿ ನೇಮಕ ಮಾಡಿದರೆ ಸದನದ ಒಳಗೆ ಮತ್ತು ಹೊರಗೆ ತೀವ್ರ ಹೋರಾಟ ಮಾಡುವುದಾಗಿ ಬಿಜೆಪಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಂಗಪ್ಪ ಅವರ ನೇಮಕ ನಿರ್ಧಾರದಿಂದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.