ಇದರಿಂದ ಕುಪಿತಗೊಂಡ ಪೇದೆ ಪಿಎಸ್​​’ಐ ಜೊತೆ ವಾಗ್ವಾದಕ್ಕಿಳಿದಿದ್ದರು. ಹಾಜರಾತಿ ಬಗ್ಗೆ ವಿಚಾರಿಸಿದ್ದಕ್ಕೆ ಪೇದೆಯೇ ಪಿಎಸ್​​ಐ ಮೇಲೆ ಹಲ್ಲೆ ಮಾಡಿರುವ ಆರೋಪ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ (ಫೆ.02): ಕಾನೂನು ಕಾಪಾಡಬೇಕಾದ ಆರಕ್ಷಕರೇ ಠಾಣೆಯಲ್ಲಿ ಕೈ ಕೈ ಮಿಲಾಯಿಸಿರುವ ಘಟನೆ ಬೆಳಗಾವಿಯ ಕಾಗವಾಡ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೇದೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ಹಿನ್ನೆಲೆ, ಹಾಜರಾತಿಯಲ್ಲಿ ಪಿಎಸ್’​​ಐ ಆನಂದ್​ ಗೈರುಹಾಜರಿ ಹಾಕಿದ್ದರು.

ಇದರಿಂದ ಕುಪಿತಗೊಂಡ ಪೇದೆ ಪಿಎಸ್​​’ಐ ಜೊತೆ ವಾಗ್ವಾದಕ್ಕಿಳಿದಿದ್ದರು. ಹಾಜರಾತಿ ಬಗ್ಗೆ ವಿಚಾರಿಸಿದ್ದಕ್ಕೆ ಪೇದೆಯೇ ಪಿಎಸ್​​ಐ ಮೇಲೆ ಹಲ್ಲೆ ಮಾಡಿರುವ ಆರೋಪ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೇದೆ ರಾಜುವನ್ನು ವಶಕ್ಕೆ ಪಡೆದ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.