ವಿವಾದಿತ ಸ್ಥಳದಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ದ ವಿದ್ಯಾರ್ಥಿಗಳು ಧ್ವನಿಯೆತ್ತಿದ್ದಾರೆ. ಪಾಕಿಸ್ತಾನದ ಪಡೆಗಳು ಪಿಓಕೆನಲ್ಲಿ ಸಾಕಷ್ಟು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ. ಪಾಕಿಸ್ತಾನ ಇಲ್ಲಿ ನಿಯೋಜಿಸಿರುವ ರಕ್ಷಣಪಡೆಗಳನ್ನು ಶೀಘ್ರವೇ ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಶ್ರೀನಗರ(ಆ.19): ಪಾಕಿಸ್ತಾನದಿಂದ ಸಾತಂತ್ರ್ಯ ಬಯಸಿ ಪಾಕ್ ಆಕ್ರಮಿತ ಕಾಶ್ಮೀರ(ಪಿಓಕೆ)ದ ವಿದ್ಯಾರ್ಥಿ ಸಂಘಟನೆ ಸ್ಥಳೀಯ ನಾಯಕ ಲಿಖಾಯತ್ ಖಾನ್ ನೇತೃತ್ವದಲ್ಲಿ ಬೀದಿಗಿಳಿದೆದೆ

Add Asianetnews Kannada as a Preferred SourcegooglePreferred

ಜಮ್ಮು ಮತ್ತು ಕಾಶ್ಮೀರದ ಜಾಂಡಿಲಿಯಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಜೆಕೆಎನ್‌'ಎಸ್‌'ಎಫ್‌) ಪಾಕಿಸ್ತಾನದಿಂದ ನಮಗೆ ಸ್ವಾತಂತ್ರ್ಯ ಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಜಾಂಡಿಲಿ ಪ್ರದೇಶದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಸ್ವಾತಂತ್ರ್ಯಕ್ಕಾಗಿ ಆಗ್ರಹಿಸಿದ್ರು. ‘ಕಾಶ್ಮೀರ ಬಚನಾಯೆ ನಿಕ್ಲೆ ಹೈ, ಆವೋ ಹಮಾರಾ ಸಾಥ್ ಚಲೋ’ ಅಂತ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ವಿವಾದಿತ ಸ್ಥಳದಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ದ ವಿದ್ಯಾರ್ಥಿಗಳು ಧ್ವನಿಯೆತ್ತಿದ್ದಾರೆ. ಪಾಕಿಸ್ತಾನದ ಪಡೆಗಳು ಪಿಓಕೆನಲ್ಲಿ ಸಾಕಷ್ಟು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ. ಪಾಕಿಸ್ತಾನ ಇಲ್ಲಿ ನಿಯೋಜಿಸಿರುವ ರಕ್ಷಣಪಡೆಗಳನ್ನು ಶೀಘ್ರವೇ ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಶಾಂತಿಯುತ ಸ್ಥಳವನ್ನು ಹಾಳು ಮಾಡಲು ಪಾಕಿಸ್ತಾನ ಇಲ್ಲಿ ಭಯೋತ್ಪಾದಕರನ್ನು ಕಳುಹಿಸುತ್ತಿದೆ. ಅಲ್ಲದೇ ಅಮಾಯಕ ನಾಗರಿಕರ ಮೇಲೆ ದೌರ್ಜನ್ಯವೆಸಗುತ್ತಿದೆ ಎಂದು ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.