ಅಪಘಾತವೊಂದರಲ್ಲಿ ಕಣ್ಣು ಕಳೆದುಕೊಂಡ ಶಿಕ್ಷರೊಬ್ಬರ ಶಸ್ತ್ರಚಿಕಿತ್ಸೆಗೆ ವಿದ್ಯಾರ್ಥಿಗಳು ತಮ್ಮ ಪಾಕೆಟ್ ಮನಿಯನ್ನು ಸಂಗ್ರಹಿಸಿ ನೆರವಾಗಿರುವ ಮನಮುಟ್ಟುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಅನಂತಪುರ, ಆಂಧ್ರಪ್ರದೇಶ: ಅಪಘಾತವೊಂದರಲ್ಲಿ ಕಣ್ಣು ಕಳೆದುಕೊಂಡ ಶಿಕ್ಷರೊಬ್ಬರ ಶಸ್ತ್ರಚಿಕಿತ್ಸೆಗೆ ವಿದ್ಯಾರ್ಥಿಗಳು ತಮ್ಮ ಪಾಕೆಟ್ ಮನಿಯನ್ನು ಸಂಗ್ರಹಿಸಿ ನೆರವಾಗಿರುವ ಮನಮುಟ್ಟುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಆಂಧ್ರ ಪ್ರದೇಶದ ಅಂನಂತಪುರ ಜಿಲ್ಲೆಯ ತಡಿಪತ್ರಿಯಲ್ಲಿರುವ ಟಾರ್ಗೆಟ್ ಎಂಬ ಖಾಸಗಿ ಶಾಲೆಯಲ್ಲಿ ಗಣಿತ ಶಿಕ್ಷಕರಾಗಿರುವ ನಾಗರಾಜು ಅಪಘಾತಕ್ಕೊಳಗಾಗಿದ್ದು, ದೃಷ್ಟಿಯನ್ನು ಕಳೆದುಕೊಂಡಿದ್ದಾರೆ. ಹೈದರಾಬಾದಿನಲ್ಲಿ ವೈದ್ಯರಿಗೆ ತೋರಿಸಿದಾಗ, ಸಮಸ್ಯೆಯನ್ನು ಸರಿಪಡಿಸಬಹದು ಆದರೆ ಶಸಸ್ತ್ರಚಿಕಿತ್ಸೆಗೆ ಸುಮಾರು ₹1 ಲಕ್ಷ ಹಣ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮೊದಲೇ ಬಡ ಕುಟುಂಬದಿಂದ ಬಂದಿದ್ದ ನಾಗರಾಜು, ಅಪಘಾತಕ್ಕೊಳಗಾಗಿದ್ದರಿಂದ ಻ವರ ರ್ಥಿಕ ಸ್ಥಿತಿ ಇನ್ನೂ ಬಿಗಡಾಯಿಸಿತ್ತು.

ಆದರೆ ಈ ವಿಷಯವನ್ನು ಅರ್ಥಮಾಡಿಕೊಂಡ ಶಾಲಾ ಸಂಚಾಲಕ ಜಯಚಂದ್ರ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಾಗರಾಜು ಅವರಿಗೆ ನೆರವಾಗಲು ನಿರ್ಧರಿಸಿದ್ದಾರೆ.

ಅದರಂತೇ, ತಮ್ಮ ಪಾಕೆಟ್ ಮನಿಯನ್ನು ಉಳಿಸಿ ಒಟ್ಟು ₹ 60090 ನ್ನು ಉಳಿಸಿ ನಾಗರಾಜು ಅವರ ಶಸ್ತ್ರಚಿಕಿತ್ಸೆಗಾಗಿ ನೀಡಿದ್ದಾರೆ. ಜತೆಗೆ ನಾಗರಾಜು ಅವರ ನೆರವಿಗೆ ಬರಲು ಇತರರಿಗೂ ಮನವಿ ಮಾಡಿಕೊಂಡಿದ್ದಾರೆ.

(ಸಾಂದರ್ಭಿಕ ಚಿತ್ರ)