ಕೇಂದ್ರ, ಯುಪಿ ಸರ್ಕಾರಗಳ ಮೇಲೆ ಗುಡುಗಿದ ಸುಬ್ರಮಣಿಯನ್ ಸ್ವಾಮಿ| ರಾಮ ಮಂದಿರಕ್ಕೆ ಅಡ್ಡಿ ಮಾಡಿದರೆ ಸರ್ಕಾರ ಬೀಳಿಸುವ ಬೆದರಿಕೆ| ಬಿಜೆಪಿ ನಾಯಕನಿಂದಲೇ ಕೇಂದ್ರ ಸರ್ಕಾರ ಬೀಳಿಸುವ ಬೆದರಿಕೆ| ನ್ಯಾಯಾಲಯದಲ್ಲಿ ವಾದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ ಸ್ವಾಮಿ| ಮಂದಿರ ನಿರ್ಮಾಣಕ್ಕೆ ಯುಪಿ, ಕೇಂದ್ರ ಸರ್ಕಾರಗಳೇ ನಮಗೆ ಶತ್ರುಗಳು| ರಾಮ ಮಂದಿರ ಕಟ್ಟಲು ಮುಸ್ಲಿಮರ ವಿರೋಧವಿಲ್ಲ ಎಂದ ಸ್ವಾಮಿ

ನವದೆಹಲಿ(ಡಿ.08): ಒಂದು ವೇಳೆ ಕೇಂದ್ರ ಸರ್ಕಾರ ಅಥವಾ ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸಿದ್ದಾದರೆ ಸರ್ಕಾರವನ್ನು ಉರುಳಿಸುವುದಾಗಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ರಾಮಮಂದಿರ ಸಂಬಂಧ ವಿಚಾರಣೆಯನ್ನು ನ್ಯಾಯಾಲಯ ಮುಂದಿನ ಜನವರಿಗೆ ಕಾಯ್ದಿರಿಸಿದೆ. ನಾವು ನ್ಯಾಯಾಲಯದಲ್ಲಿ ಕೇವಲ ಎರಡು ವಾರಗಳಲ್ಲಿ ಈ ಹೋರಾಟವನ್ನು ಗೆಲ್ಲಲಿದ್ದೇವೆ ಎಂದು ಸುಬ್ರಮಣಿಯನ್ ಭರವಸೆ ವ್ಯಕ್ತಪಡಿಸಿದ್ದಾರೆ. 

ಸದ್ಯ ನಮ್ಮ ಶತ್ರು ಸುಪ್ರೀಂ ಕೋರ್ಟ್ ಅಲ್ಲ ಬದಲಿಗೆ ಉತ್ತರಪ್ರದೇಶ ಮತ್ತು ಕೇಂದ್ರ ಸರ್ಕಾರಗಳೇ ನಮಮ ಶತ್ರುಗಳು. ಹೀಗಾಗಿ ಒಂದು ವೇಳೆ ರಾಮ ಮಂದಿರಕ್ಕೆ ಅಡ್ಡಿಯುಂಟು ಮಾಡಿದರೆ, ಈ ಎರಡು ಸರ್ಕಾರಗಳನ್ನು ನಾನೇ ಖುದ್ದಾಗಿ ಬೀಳಿಸುತ್ತೇನೆ ಎಂದು ಸ್ವಾಮಿ ಗುಡುಗಿದ್ದಾರೆ.

‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಮುಸ್ಲಿಮರಿಗೆ ಯಾವುದೇ ಆಕ್ಷೇಪಗಳಿಲ್ಲ ಎಂದು ನಾನು ಬಲ್ಲೆ ಎಂದಿರುವ ಸ್ವಾಮಿ, ನಾನು ವೈಯಕ್ತಿಕವಾಗಿ ಮುಸ್ಲಿಮರನ್ನು ಭೇಟಿಯಾಗಿದ್ದು ಅವರೇ ನನಗೆ ಈ ಮಾತುಗಳನ್ನು ಹೇಳಿದ್ದಾರೆ’ ಎಂದು ಸ್ವಾಮಿ ಹೇಳಿದ್ದಾರೆ.