ಕಾಂಗ್ರೆಸ್  ಪಕ್ಷ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಅಲ್ಲ, ಇಟಲಿ ಕಾಂಗ್ರೆಸ್  ಪಾರ್ಟಿ. ಸದ್ಯದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಿಹಾರ್ ಜೈಲಿಗೆ ಹೋಗುವುದರಲ್ಲಿ ಎರಡು ಮಾತಿಲ್ಲ. ನ್ಯಾಷನಲ್ ಹೆರಾಲ್ಡ್ ಕೇಸ್'ನಲ್ಲಿ  ಕಂಪನಿಯ ಅಕೌಂಟ್ ಬುಕ್ ಕೇಳಿದ್ದೀನಿ. ಸದ್ಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ಅವರು ಕನ್ನಿಮೂಳಿ ಡಿ ರಾಜಾ ಹಾಗೆ ಜೈಲಿಗೆ ಹೋಗುತ್ತಾರೆ ಎಂದು ಕೆ.ಎಲ್.ಇ ಜಿರಗಿ ಭವನದಲ್ಲಿ ನಡೆದ ಪ್ರಬುದ್ಧ  ಭಾರತ  ಸಮಾರಂಭದಲ್ಲಿ ಸುಬ್ರಮಣಿಯನ್ ಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  

ಬೆಳಗಾವಿ (ನ.05): ಕಾಂಗ್ರೆಸ್ ಪಕ್ಷ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಅಲ್ಲ, ಇಟಲಿ ಕಾಂಗ್ರೆಸ್ ಪಾರ್ಟಿ. ಸದ್ಯದಲ್ಲಿ ಸೋನಿಯಾ ಗಾಂದಿ ಮತ್ತು ರಾಹುಲ್ ಗಾಂಧಿ ತಿಹಾರ್ ಜೈಲಿಗೆ ಹೋಗುವುದರಲ್ಲಿ ಎರಡು ಮಾತಿಲ್ಲ. ನ್ಯಾಷನಲ್ ಹೆರಾಲ್ಡ್ ಕೇಸ್'ನಲ್ಲಿ ಕಂಪನಿಯ ಅಕೌಂಟ್ ಬುಕ್ ಕೇಳಿದ್ದೀನಿ. ಸದ್ಯದಲ್ಲಿ ಸೋನಿಯಾ ರಾಹುಲ್ ಗಾಂಧಿ ಅವರು ಕನ್ನಿಮೂಳಿ ಡಿ ರಾಜಾ ಹಾಗೆ ಜೈಲಿಗೆ ಹೋಗುತ್ತಾರೆ ಎಂದು ಕೆ.ಎಲ್.ಇ ಜಿರಗಿ ಭವನದಲ್ಲಿ ನಡೆದ ಪ್ರಬುದ್ಧ ಭಾರತ ಸಮಾರಂಭದಲ್ಲಿ ಸುಬ್ರಮಣಿಯನ್ ಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Add Asianetnews Kannada as a Preferred SourcegooglePreferred

ಕೆ.ಎಲ್.ಇ ಜಿರಗಿ ಭವನದಲ್ಲಿ ಇಂದು ನಡೆದ ಪ್ರಬುದ್ಧ ಭಾರತ ಸಮಾರಂಭದಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಭಾಗಿಯಾಗಿದ್ದರು.

ಟಿಪ್ಪು ಯಾವತ್ತೂ ಸ್ವಾತಂತ್ರ್ಯ ಹೋರಾಟಗಾರ ಅಲ್ಲ. ಆತ ಫ್ರೆಂಚರಿಂದ ಹಣ ಪಡೆದು ಬ್ರಿಟಿಷರ ಜೊತೆ ಯುದ್ಧ ಮಾಡಿದ ಅಷ್ಟೇ. ಇದನ್ನೇ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುವುದು ಸರಿಯಲ್ಲ ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದರು. ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿದರು.

ರಾಮ ಮಂದಿರ ನಿರ್ಮಾಣ ವಿಚಾರವಾಗಿ ಮಾತನಾಡುತ್ತಾ, ರಾಮಮಂದಿರ ಕಟ್ಟಿಯೇ ಕಟ್ಟುತ್ತೇವೆ. ಭಾರತ ದೇಶದ ಹಿಂದೂಗಳು ಮೊದಲು ಒಂದಾಗಬೇಕು. ನಾವು ಮೊದಲು ಹಿಂದೂಗಳು. ನಂತರ ಬ್ರಾಹ್ಮಣ, ಕ್ಷತ್ರಿಯರು ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದರು.