ಗಂಡ -ಹೆಂಡತಿಯ ಕಲಹ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರು(ಆ.14): ಗಂಡ -ಹೆಂಡತಿಯ ಕಲಹ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತೇಜಾವತಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಪತಿಯ ಕಿರುಕುಳವೇ ಪತ್ನಿಯ ಆತ್ಮಹತ್ಯೆ ಕಾರಣ ಎಂದು ತಿಳಿದು ಬಂದಿದೆ. ಗಂಡ-ಹೆಂಡತಿ ಇಬ್ಬರೂ ಸರ್ಕಾರಿ ಶಾಲಾ ಶಿಕ್ಷಕರಾಗಿದ್ರು. ಆದ್ರೆ ಇಬ್ಬರ ನಡುವೇ ವೈಮನಸ್ಸು ಇದ್ದ ಹಿನ್ನೆಲೆಯಲ್ಲಿ ಜಗಳ ವಿಕೋಪಕ್ಕೆ ಹೋಗಿ ವಿಷ ಸೇವಿಸಿ ಆತ್ಮಹತೆಗೆ ಶರಣಾಗಿದ್ದಾಳೆ. 

ವಿಷ ಸೇವಿಸಿದ್ದ ತೇಜಾವತಿಯನ್ನು ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ತೇಜಾವತಿ ಸಾವನ್ನಪಿದ್ದಾಳೆ. ಈ ಸಂಬಂಧ ಗಂಡನನ್ನು ವಶಕ್ಕೆ ಪಡೆದಿರುವ ಕಾಮಾಕ್ಷಿಪಾಳ್ಯ ಪೊಲೀಸರು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.