ಸರಕು ಹಾಗೂ ಸೇವಾ ತೆರಿಗೆ (ಜಿಎಸ್’ಟಿ) ವಿಷಯದಲ್ಲಿ ಪ್ರತಿಪಕ್ಷಗಳು ಸರ್ಕಾರಕ್ಕೆ ಸಹಕರಿಸಿವೆ. ಅದೇ ರೀತಿ, ಜನಸಾಮಾನ್ಯರನ್ನು ಬಾಧಿಸುತ್ತಿರುವ ಭ್ರಷ್ಟಚಾರ, ಕಪ್ಪುಹಣ ಹಾಗೂ ನಕಲಿ ನೋಟುಗಳ ವಿರುದ್ಧದ ಸಮರದಲ್ಲೂ ಸರ್ಕಾರವನ್ನು ಬೆಂಬಲಿಸಬೇಕೆಂದು ಮೋದಿ ಕರೆ ನೀಡಿದ್ದಾರೆಂದು ಅನಂತ್ ಕುಮಾರ್ ಹೇಳಿದ್ದಾರೆ.

ನವದೆಹಲಿ (ನ.15): ಕಪ್ಪಹಣದ ವಿರುದ್ಧ ಸರ್ಕಾರ ಸಾರಿರುವ ಸಮರವನ್ನು ಬೆಂಬಲಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆಯಲ್ಲಿ ಎಲ್ಲಾ ಪಕ್ಷಗಳಿಗೆ ಕರೆಕೊಟ್ಟಿದ್ದಾರೆಂದು ಸಂಸದೀಯ ವ್ಯವಹಾರಗಳ ಮಂತ್ರಿ ಅನಂತ್ ಕುಮಾರ್ ಹೇಳಿದ್ಧಾರೆ.

Add Asianetnews Kannada as a Preferred SourcegooglePreferred

ಯಾವುದೇ ವಿಷಯಗಳಿದ್ದರೂ ನಾಳೆ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸೋಣ ಎಂದು ಪ್ರಧಾನಿ ಹೇಳಿದ್ದಾರೆ.

ಸರಕು ಹಾಗೂ ಸೇವಾ ತೆರಿಗೆ (ಜಿಎಸ್’ಟಿ) ವಿಷಯದಲ್ಲಿ ಪ್ರತಿಪಕ್ಷಗಳು ಸರ್ಕಾರಕ್ಕೆ ಸಹಕರಿಸಿವೆ. ಅದೇ ರೀತಿ, ಜನಸಾಮಾನ್ಯರನ್ನು ಬಾಧಿಸುತ್ತಿರುವ ಭ್ರಷ್ಟಚಾರ, ಕಪ್ಪುಹಣ ಹಾಗೂ ನಕಲಿ ನೋಟುಗಳ ವಿರುದ್ಧದ ಸಮರದಲ್ಲೂ ಸರ್ಕಾರವನ್ನು ಬೆಂಬಲಿಸಬೇಕೆಂದು ಮೋದಿ ಕರೆ ನೀಡಿದ್ದಾರೆಂದು ಅನಂತ್ ಕುಮಾರ್ ಹೇಳಿದ್ದಾರೆ.

ದೇಶದಲ್ಲಿ ಏಕಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ಚುನಾವಣೆಗಳನ್ನು ನಡೆಸುವ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ನೀಡುವಂತೆಯೂ ಪ್ರಧಾನಿ ಪ್ರತಿಪಕ್ಷಗಳನ್ನು ಕೇಳಿಕೊಂಡಿದ್ದಾರೆ ಎಂದು ಅನಂತ್ ಕುಮಾರ್ ತಿಳಿಸಿದ್ದಾರೆ.