ಹಿರಿಯ ವಕೀಲರಾದ ಫಾಲಿ ಎಸ್.ನಾರಿಮನ್ ಮತ್ತು ಹರೀಶ್ ಸಾಳ್ವೆ, ಆನ್‌ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೀಗೆ ಅಭಿಪ್ರಾಯ ವ್ಯಕ್ತಪಡಿಸುವುದರ ಮೇಲೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು

ನವದೆಹಲಿ(ಅ.06): ಆನ್‌ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು ವಾಕ್ ಸ್ವಾತಂತ್ರ್ಯ ಎಂಬ ವಾದಕ್ಕೆ ಪೆಟ್ಟು ನೀಡುವಂಥ ನಿಲುವೊಂದನ್ನು ಸುಪ್ರೀಂಕೋರ್ಟ್ ಗುರುವಾರ ವ್ಯಕ್ತಪಡಿಸಿದೆ.

Add Asianetnews Kannada as a Preferred SourcegooglePreferred

ಇತ್ತೀಚೆಗೆ ವಕೀಲರೊಬ್ಬರು ಸುದ್ದಿವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ವೇಳೆ ಸುಪ್ರೀಂಕೋರ್ಟ್'ನಲ್ಲಿ ಕೆಲ ನ್ಯಾಯಾಧೀಶರು ಸರ್ಕಾರದ ಪರವಾಗಿದ್ದಾರೆ ಎಂಬರ್ಥದಲ್ಲಿ ಮಾತುಗಳನ್ನು ಆಡಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ, ಟೀಕೆಗೆ ಗುರಿಯಾಗಿತ್ತು. ಈ ವಿಷಯವನ್ನು ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ, ನಾವು ಸರ್ಕಾರವನ್ನು ಹೇಗೆ ತರಾಟೆಗೆ ತೆಗೆದುಕೊಳ್ಳುತ್ತೇವೆ ಎಂಬುದನ್ನು ತಿಳಿಯಲು, ವೃಥಾ ಆರೋಪ ಮಾಡುವವರು ಸುಪ್ರೀಂಕೋರ್ಟ್‌ಗೆ ಆಗಮಿಸಿ ತಿಳಿಯಬೇಕು ಎಂದು ಕಿಡಿಕಾರಿದರು.

ಈ ವೇಳೆ ಮಧ್ಯಪ್ರವೇಶಿಸಿದ ಹಿರಿಯ ವಕೀಲರಾದ ಫಾಲಿ ಎಸ್.ನಾರಿಮನ್ ಮತ್ತು ಹರೀಶ್ ಸಾಳ್ವೆ, ಆನ್‌ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೀಗೆ ಅಭಿಪ್ರಾಯ ವ್ಯಕ್ತಪಡಿಸುವುದರ ಮೇಲೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು. ಈ ಸಲಹೆಗೆ ನ್ಯಾಯಪೀಠ ಸಹಮತ ವ್ಯಕ್ತಪಡಿಸಿತು.