ಲೋಕಸಭೆ ಚುನಾವಣೆಗೆ ಪೂರ್ವ ಭಾವಿಯಾಗಿ ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ರಥಯಾತ್ರೆಗೆ ಪಡೆಯಲಾಗಿದ್ದ ಅವಕಾಶ ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಆದೇಶದ ವಿರುದ್ಧದ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸಬೇಕು ಎಂಬ ಬಿಜೆಪಿ ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನವದೆಹಲಿ (ಡಿ. 25): ಲೋಕಸಭೆ ಚುನಾವಣೆಗೆ ಪೂರ್ವ ಭಾವಿಯಾಗಿ ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ರಥಯಾತ್ರೆಗೆ ಪಡೆಯಲಾಗಿದ್ದ ಅವಕಾಶ ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಆದೇಶದ ವಿರುದ್ಧದ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸಬೇಕು ಎಂಬ ಬಿಜೆಪಿ ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Add Asianetnews Kannada as a Preferred SourcegooglePreferred

ಈ ಕುರಿತು ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಸಾಮಾನ್ಯ ಅರ್ಜಿ ಎಂದು ಪರಿಗಣಿಸಿದ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲು ನಿರ್ಧರಿಸಿದೆ. ಹೀಗಾಗಿ, ಪಶ್ಚಿಮ ಬಂಗಾಳದ 42 ಕ್ಷೇತ್ರಗಳಲ್ಲಿ ‘ಪ್ರಜಾಪ್ರಭುತ್ವ ಉಳಿಸಿ ಯಾತ್ರೆ’ ಕೈಗೊಳ್ಳಲು
ಮುಂದಾಗಿದ್ದ ಬಿಜೆಪಿಗೆ ಹಿನ್ನಡೆಯಾಗಿದೆ.