ಶಿವಾನಂದ ಸರ್ಕಲ್ ಬಳಿ ನಿರ್ಮಾಣವಾಗುತ್ತಿರುವ ಸ್ಟೀಲ್ ಬ್ರಿಡ್ಜ್​ ನಿರ್ಮಾಣ  ಕಾಮಗಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. 

ಬೆಂಗಳೂರು (ಮಾ. 12): ಶಿವಾನಂದ ಸರ್ಕಲ್ ಬಳಿ ನಿರ್ಮಾಣವಾಗುತ್ತಿರುವ ಸ್ಟೀಲ್ ಬ್ರಿಡ್ಜ್​ ನಿರ್ಮಾಣ ಕಾಮಗಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. 

ಮೂಲ ಅರ್ಜಿ ಇತ್ಯರ್ಥಕ್ಕೆ ಹೈಕೋರ್ಟ್​ಗೆ ಸೂಚನೆ ನೀಡಿದೆ. ಶೀಘ್ರವೇ ವಿಚಾರಣೆ ನಡೆಸುವಂತೆ ಹೈಕೋರ್ಟ್​ಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಬಿ.ಪಿ. ಮಹೇಶ್​ ಎಂಬುವರು ಕಾಮಗಾರಿ ತಡೆ ಕೋರಿ ಹೈಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಾಮಗಾರಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಮಹೇಶ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ​ಇಂದು ಸುಪ್ರೀಂಕೋರ್ಟ್ ಕೂಡಾ ನಕಾರ ವ್ಯಕ್ತಪಡಿಸಿದೆ.