ಜಲ್ಲಿಕಟ್ಟು ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಇದನ್ನು ವಿರೋಧಿಸಿ ಡಿಎಂಕೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಚೆನ್ನೈ (ಜ.12): ಜಲ್ಲಿಕಟ್ಟು ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಇದನ್ನು ವಿರೋಧಿಸಿ ಡಿಎಂಕೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಲ್ಲಿಕಟ್ಟಿಗೆ ಸಂಬಂಧಿಸಿದಂತೆ ತೀರ್ಪಿನ ಕರಡು ತಯಾರಾಗಿದ್ದು ಶನಿವಾರಕ್ಕಿಂತ ಮುಂಚಿತವಾಗಿ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲವೆಂದು ಈ ಮೊದಲು ಸುಪ್ರೀಂಕೋರ್ಟ್ ಹೇಳಿತ್ತು.

ಜಲ್ಲಿಕಟ್ಟು ನಿಷೇಧವನ್ನು ರದ್ದುಗೊಳಿಸಿ ಆದೇಶ ನೀಡುವಂತೆ ನ್ಯಾಯಪೀಠಕ್ಕೆ ಕೇಳುವುದು ಸರಿಯಲ್ಲ ಎಂದು ನ್ಯಾ. ಜಗದೀಶ್ ಸಿಂಗ್ ಖೇಹರ್ ನೇತೃತ್ವದ ಪೀಠ ಹೇಳಿದೆ.

ಅಮ್ಮನ ಹಾದಿಯನ್ನು ಅನುಸರಿಸುವ ನಾನು ಮತ್ತು ತಮಿಳುನಾಡು ಸರ್ಕಾರ ಜಲ್ಲಿಕಟ್ಟು ಕ್ರೀಡೆಯನ್ನು ಆಯೋಜಿಸುತ್ತೇವೆ. ಈ ನಿರ್ಧಾರದಿಂದ ಹಿಂತಿರುಗುವುದಿಲ್ಲ. ತಮಿಳರ ಪರಂಪರೆ ಮತ್ತು ಸಂಸ್ಕೃತಿಯನ್ನು ನಾವು ಎತ್ತಿ ಹಿಡಿಯುತ್ತೇವೆ ಎಂದು ಜನರಿಗೆ ಭರವಸೆ ನೀಡಲು ಬಯಸುತ್ತೇವೆ ಎಂದು ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಹೇಳಿದ್ದಾರೆ.