ರಫೆಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆಯಾ?| ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯುತ್ತಾ?| ನಾಳೆ ಸುಪ್ರೀಂ ಕೋರ್ಟ್ ಪ್ರಕಟಿಸಲಿದೆ ಮಹತ್ವದ ತೀರ್ಪು| ರಫೆಲ್ ಒಪ್ಪಂದದ ತನಿಖೆಗಾಗಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ| ತೀರ್ಪು ಪ್ರಕಟಿಸಲಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನೇತೃತ್ವದ ತ್ರಿಸದಸ್ಯ ಪೀಠ  

ನವದೆಹಲಿ(ಡಿ.13): ರಫೆಲ್ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು, ತನ್ನ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕೋ ಅಥವಾ ಬೇಡವೋ ಎಂಬುದರ ಕುರಿತು ನಾಳೆ(ಶುಕ್ರವಾರ) ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಫೆಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

Scroll to load tweet…

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನೇತೃತ್ವದ ತ್ರಿಸದಸ್ಯ ಪೀಠ ಈ ಕುರಿತು ವಿಚಾರಣೆ ನಡೆಸಿದ್ದು, ಈ ಕುರಿತು ನಾಳೆ ಬೆಳಗ್ಗೆ 10-30ಕ್ಕೆ ತನ್ನ ತೀರ್ಪು ಪ್ರಕಟಿಸಲಿದೆ.

ರಫೆಲ್ ಒಪ್ಪಂದದ ಕುರಿತು ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಸಂಸತ್ತಿನಲ್ಲಿ ಒತ್ತಾಯಿಸುತ್ತಿದೆ. ಈ ಮಧ್ಯೆ ನಾಳಿನ ಸುಪ್ರೀಂ ಕೋರ್ಟ್ ತೀರ್ಪು ಮಹತ್ವ ಪಡೆದುಕೊಂಡಿದೆ.