ಬೆಂಗಳೂರು (ಅ.13): ಚಾಲುಕ್ಯ ವೃತ್ತದಿಂದ ಹೆಬ್ಬಾಳದವರೆಗೆ ಬಿಡಿಎ ನಿರ್ಮಿಸಲು ಹೊರಟಿರುವ ಉಕ್ಕಿನ ಸೇತುವೆಗೆ ನಗರದಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿದ್ದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು (ಅ.13): ಚಾಲುಕ್ಯ ವೃತ್ತದಿಂದ ಹೆಬ್ಬಾಳದವರೆಗೆ ಬಿಡಿಎ ನಿರ್ಮಿಸಲು ಹೊರಟಿರುವ ಉಕ್ಕಿನ ಸೇತುವೆಗೆ ನಗರದಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿದ್ದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅವರ ಪತ್ರದಲ್ಲಿ ಯೋಜನೆಯನ್ನು ವಿರೋಧಿಸಲು ಕಾರಣಗಳನ್ನು ಈ ಕೆಳಗಿನಂತೆ ನೀಡಿದ್ದಾರೆ.

ಜನಸಾಮಾನ್ಯರ ತೆರಿಗೆ ಹಣದಲ್ಲಿ 1800 ಕೋಟಿ ವೆಚ್ಚದಲ್ಲಿ ಸರ್ಕಾರ ಈ ಯೋಜನೆ ಮಾಡಲು ಮುಂದಾಗಿದೆ. ಜನರ ಅಭಿಪ್ರಾಯವನ್ನೂ ಸಹ ಬಿಡಿಎ ಕೇಳಿಲ್ಲ.

ಬೃಹತ್ ಪ್ರಮಾಣದ ಹಣವನ್ನು ವಿನಿಯೋಗಿಸುವ ಸಾರ್ವಜನಿಕ ಯೋಜನೆಯನ್ನು ರೂಪಿಸುವಾಗ ಸಾರ್ಜನಿಕರ ಅಭಿಪ್ರಾಯವನ್ನು ಕೇಳಬೇಕೆಂದು ಸುಪ್ರೀಂ ಕೋರ್ಟ್ ನಿರ್ದೆಶನವಿದೆ. ಆದರೆ ಸೇತುವೆ ಯೋಜನೆ ಬಗ್ಗೆ ಸಾರ್ವಜನಿಕರಿಗೆ ವಿವರ ನೀಡಿಲ್ಲ.

ಸೇತುವೆ ನಿರ್ಮಾಣಕ್ಕೆ ಸುಮಾರು 862 ಮರಗಳನ್ನು ಕಡಿಯಬೇಕಾಗುತ್ತದೆ. ಪ್ರತಿ ಮರಕ್ಕೆ 10 ಸಸಿಗಳನ್ನು ನೆಡುತ್ತೇವೆ ಎಂದು ಬಿಡಿಎ ಹೇಳಿರುವುದು ಹಾಸ್ಯಾಸ್ಪದ. ಸಸಿಗಳನ್ನು ನೆಡುವುದಕ್ಕೆ ಜಾಗವೂ ಸಹ ಇಲ್ಲ.

ನಿಮಗೆ ಗೊತ್ತಿರುವಂತೆ ಬೆಂಗಳೂರು-ಮೈಸೂರು ರಸ್ತೆಯನ್ನು ಹಿಂದೊಮ್ಮೆ ಅಗಲೀಕರಣ ಮಾಡಲಾಗಿತ್ತು. ಅಗಲೀಕರಣಕ್ಕೂ ಮುನ್ನ ಆ ರಸ್ತೆ ಎಷ್ಟು ಚೆನ್ನಾಗಿತ್ತು? ಸಾವಿರಾರು ಮರಗಳನ್ನು ಕಡಿಯಲಾಗಿದ್ದು 1 ಮರಕ್ಕೆ 10 ಸಸಿಗಳನ್ನು ನೆಡುತ್ತೇವೆ ಎಂದಿದ್ದರು. ಆದರೆ ಅದಿನ್ನೂ ಕಾರ್ಯರೂಪವಾಗಿಲ್ಲ. 

ಪತ್ರದಲ್ಲಿ ಇನ್ನೂ ಹೆಚ್ಚಿನ ಅಂಶಗಳನ್ನು ಹೇಳಿದ್ದಾರೆ. ಅದು ಈ ಕೆಳಗಿನಂತಿದೆ.