ಪಾಕಿಸ್ತಾನಕ್ಕೆ ನುಗ್ಗಿ  ಉಗ್ರರನ್ನು ಸದೆಬಡಿದ ಯೋಧರು ಮತ್ತು ಕೇಂದ್ರ ಸರಕಾರವನ್ನು ಇಡೀ ದೇಶವೇ ಕೊಂಡಾಡುತ್ತಿದ್ದರೆ ಇತ್ತ ಕಾಂಗ್ರೆಸ್ ಸಂಸದರೊಬ್ಬರು ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ.

ಯಾದಗಿರಿ[ಫೆ.26]  ಸರ್ಜಿಕಲ್ ಸ್ಟ್ರೈಕ್ ಹೊಸದಲ್ಲ. ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರ ಪ್ರಚಾರ ಪಡೆಯುತ್ತಿದೆ. ಚುನಾವಣೆಯ ಈ ಸಂದರ್ಭದಲ್ಲಿ ಸೇನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ರಾಯಚೂರು ಸಂಸದ ಬಿ.ವಿ. ನಾಯಕ್ ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೇಶದ ಆಂತರಿಕ ರಕ್ಷಣೆ ಸಂದರ್ಭದಲ್ಲಿ ಇಂತಹ ಪ್ರಕ್ರಿಯೆಗಳು ಸಹಜ. ಈ ಹಿಂದೆಯೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗಲೂ ಇಂತಹ ದಾಳಿ ನಡೆಸಿತ್ತು, ಆದರೆ ಪ್ರಚಾರ ಮಾಡಲಿಲ್ಲ., ಸದ್ಯ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೋಸ್ಕರ ದಾಳಿಯ ಪ್ರಚಾರ ಪಡೆಯುತ್ತಿದೆ ಎಂದಿದ್ದಾರೆ.

ಟ್ರೋಲ್ ಆಯ್ತು ಪಾಕಿಸ್ತಾನ, ಸಂಭ್ರಮಾಚರಣೆ ನಡುವೆ ನಗುವಿನ ಗುಳಿಗೆ

ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಳ್ಳಲು ಯಾದಗಿರಿಗೆ ಆಗಮಿಸಿದ ಕಾಂಗ್ರೆಸ್ ಸಂಸದರು ಇಂಥ ಹೇಳಿಕೆ ನೀಡಿದ್ದಾರೆ.