ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಹರಕೆ : 20 ಸಾವಿರ ಮಂದಿಗೆ ಬಾಡೂಟ
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಬೇಕು ಎಂದು ದೇವಿಗೆ ಹರಕೆ ಹೊರಲಾಗಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ.
ಬಳ್ಳಾರಿ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಬೇಕು ಎಂದು ದೇವಿಗೆ ಹರಕೆ ಹೊರಲಾಗಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ.
ಮಾಜಿ ಶಾಸಕ ನಾ.ರಾ. ಸೂರ್ಯನಾರಾಯಣ ರೆಡ್ಡಿ ಅವರು ಶುಕ್ರವಾರ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ದೇವಲಾಪುರ ಬಳಿ ಸಾವಿರಾರು ಕಾರ್ಯಕರ್ತರಿಗೆ ಹರಕೆ ಹೊತ್ತುಕೊಂಡು ಬಾಡೂಟ ಹಾಕಿಸಿದ್ದಾರೆ. ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಭೋಜನ ಸವಿದಿದ್ದಾರೆ.