ಕುಟುಕು ಕಾರ್ಯಾಚರಣೆ ನಡೆಸಿ ಸಾಕ್ಷಿ ಸಮೇತ ಪ್ರಸಾರ ಮಾಡುತ್ತಿದ್ದಂತೆ ಪೊಲೀಸ್​ ಆಯುಕ್ತರೇ ಅದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಇಂತಹ ದಂಧೆಗಳ ಕಡಿವಾಣ ಹಾಕುವುದಷ್ಟೇ ಅಲ್ಲದೆ, ಅಕ್ರಮಕ್ಕೆ ರಕ್ಷಣೆ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮದ ಭರವಸೆ ನೀಡಿದ್ದಾರೆ.

ಬೆಂಗಳೂರು (ಮಾ.28): ಬೆಂಗಳೂರಿನ ಬಹುತೇಕ ಕಡೆ ಮಸಾಜ್​ ಪಾರ್ಲರ್​ ಹೆಸರಲ್ಲಿ ನಡೆಯುತ್ತಿರುವ ಮಾಂಸದಂಧೆಯನ್ನು ಸುವರ್ಣ ನ್ಯೂಸ್​ ಕುಟುಕು ಕಾರ್ಯಾಚರಣೆ ನಡೆಸಿ ಪ್ರಸಾರ ಮಾಡಿದ ವರದಿಯನ್ನು ಪೊಲೀಸ್ ಇಲಾಖೆಯೇ ಒಪ್ಪಿಕೊಂಡಿದೆ. ಅಲ್ಲದೆ, ದಂಧೆಗೆ ಬೆನ್ನೆಲುಬಾಗಿದ್ದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಬಿಸಿ ಮುಟ್ಟಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ವೇಶ್ಯಾವಾಟಿಕೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ವರದಿ ಮಾಡುವಂತೆ ಪ್ರತಿದಿನ ಹತ್ತಾರು ಕರೆಗಳು ಸುವರ್ಣ ನ್ಯೂಸ್​ಗೆ ಕಚೇರಿಗೆ ಬರ್ತಾನೇ ಇದ್ದವು. ಅದರಲ್ಲೂ ಇಂದಿರಾನಗರ, ಜೀವನ್​ ಭೀಮಾನಗರದಲ್ಲಿ ತುಸು ಹೆಚ್ಚಾಗಿಯೇ ಈ ದಂಧೆ ಇದೆ ಎಂಬ ಮಾಹಿತಿ ಬಂದಿತ್ತು.

ಕುಟುಕು ಕಾರ್ಯಾಚರಣೆ ನಡೆಸಿ ಸಾಕ್ಷಿ ಸಮೇತ ಪ್ರಸಾರ ಮಾಡುತ್ತಿದ್ದಂತೆ ಪೊಲೀಸ್​ ಆಯುಕ್ತರೇ ಅದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಇಂತಹ ದಂಧೆಗಳ ಕಡಿವಾಣ ಹಾಕುವುದಷ್ಟೇ ಅಲ್ಲದೆ, ಅಕ್ರಮಕ್ಕೆ ರಕ್ಷಣೆ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮದ ಭರವಸೆ ನೀಡಿದ್ದಾರೆ.

ಪೂರ್ವ ವಲಯ ಡಿಸಿಪಿ ಅಜಯ್ ಹಿಲೋರಿ ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳಿಗೂ ಚುರುಕು ಮುಟ್ಟಿಸಿದ್ದು, ಜೀವನ್​ ಭೀಮಾನಗರ ಇನ್ಸ್​​ಪೆಕ್ಟರ್​ ಶಿವಪ್ರಸಾದ್'​ ರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ

ಸುವರ್ಣ ನ್ಯೂಸ್​ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಅಕ್ರಮ ದಂಧೆ ಮಾಡುತ್ತಿದ್ದ ಬಹುತೇಕ ಮಸಾಜ್​​ ಪಾರ್ಲರ್'​ಗೆ ಬೀಗ ಹಾಕಿಸಿದ್ದಾರೆ. ಅಲ್ಲದೆ, ಅಕ್ರಮದಲ್ಲಿ ಭಾಗಿಯಾಗುವವರಿಗೂ ಖಡಕ್​ ಎಚ್ಚರಿಕೆ​​ ಕೂಡ ಹಿರಿಯ ಅಧಿಕಾರಿಗಳು ನೀಡಿದ್ದಾರೆ. ಹಲಸೂರು ಉಪವಿಭಾಗದ ಎಸಿಪಿ, ಪೂರ್ವ ವಿಭಾಗದ ಡಿಸಿಪಿ ಅವರಿಗೂ ನೋಟಿಸ್​​ ಜಾರಿ ಮಾಡಲಾಗಿದೆ.