ಇಂದು ಮೈಸೂರಿನಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಸ್ವಯಂಸೇವಕರು, ವಿದ್ಯಾರ್ಥಿಗಳು ಹುಲಿ ರಕ್ಷಣೆ ಹಾಗೂ ವನ್ಯಜೀವಿ ಸಂರಕ್ಷಣೆಯ ಬಗ್ಗೆ ವಿವಿಧ ಗ್ರಾಮಗಳಿಗೆ ತೆರಳಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಮೈಸೂರು (ಮೇ.04): ಪ್ರವಾಸೋದ್ಯಮ ಇಲಾಖೆ, ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಸಾರವಜನಿಕರು ಸೇರಿದಂತೆ ವಿವಿಧ ವಲಯಗಳಿಂದ ಅತ್ಯತ್ತಮ ಬೆಂಬಲ ಹಾಗೂ ಪ್ರೋತ್ಸಾಹ ದೊರಕಿದೆ.

Add Asianetnews Kannada as a Preferred SourcegooglePreferred

ಇಂದು ಮೈಸೂರಿನಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಸ್ವಯಂಸೇವಕರು, ವಿದ್ಯಾರ್ಥಿಗಳು ಹುಲಿ ರಕ್ಷಣೆ ಹಾಗೂ ವನ್ಯಜೀವಿ ಸಂರಕ್ಷಣೆಯ ಬಗ್ಗೆ ವಿವಿಧ ಗ್ರಾಮಗಳಿಗೆ ತೆರಳಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಈ ಅಭಿಯಾನದ ಅಂಗವಾಗಿ ಘೋಷಣಾ ವಾಕ್ಯ ಹಾಗೂ ಚಿತ್ರಕಲೆ ರಚಿಸುವಿಕೆ ಸೇರಿದಂತೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅತ್ಯುತ್ತಮ ಘೋಷಣಾ ವಾಕ್ಯ ರಚಿಸುವವರಿಗೆ ಅಭಿಯಾನದ ರಾಯಭಾರಿಯಾಗಿರುವ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಅವರ ಜೊತೆ ಪಾಲ್ಗೊಳ್ಳುವ ಅವಕಾಶವಿದೆ.

2 ತಿಂಗಳ ಕಾಲ ನಡೆಯಲಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನದಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮತ್ತು ಜಾಗೃತಿ ಅಭಿಯಾನ ನಡೆಯಲಿದೆ.