ಶಾಸಕ ಕೆ.ಶಿವಮೂರ್ತಿ ನಾಯ್ಕ ಅಧ್ಯಕ್ಷತೆಯಲ್ಲಿ ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿಯ ಸದಸ್ಯರು ಮೇ 12ರಿಂದ ಅಧ್ಯಯನ ಪ್ರವಾಸ ಕೈಗೊಳ್ಳಲಿತ್ತು.

ಬೆಂಗಳೂರು(ಮೇ 04): ಬರದ ನಡುವೆಯೂ ಉತ್ತರಭಾರತಕ್ಕೆ ಹೊರಟಿದ್ದ ರಾಜ್ಯದ ಶಾಸಕರ ಪ್ರವಾಸಕ್ಕೆ ಸದ್ಯಕ್ಕೆ ತಡೆಬಿದ್ದಿದೆ. ಶಾಸಕರ ಪ್ರವಾಶವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಅಧಿವೇಶನದವರೆಗೂ ಯಾವ ಶಾಸಕರನ್ನೂ ಪ್ರವಾಶಕ್ಕೆ ಕಳುಹಿಸುತ್ತಿಲ್ಲ. ಅಧಿವೇಶನದ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ. ಇದು ಸುವರ್ಣನ್ಯೂಸ್ ಇಂಪ್ಯಾಕ್ಟ್. ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆಯಿಂದ ಸುವರ್ಣನ್ಯೂಸ್ ಸತತವಾಗಿ ಶಾಸಕರ ಪ್ರವಾಸದ ಕುರಿತು ವರದಿ ಪ್ರಸಾರ ಮಾಡುತ್ತಲೇ ಇತ್ತು.

Add Asianetnews Kannada as a Preferred SourcegooglePreferred

ಏನಿದು ಶಾಸಕರ ಪ್ರವಾಸ?
ಅಧೀನ ಶಾಸನ ರಚನಾ ಸಮಿತಿಯ ತಂಡ ಹಾಗೂ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಕಲ್ಯಾಣ ಸಮಿತಿ ಸದಸ್ಯರು ಪ್ರತ್ಯೇಕವಾಗಿ ಪ್ರವಾಸ ಕೈಗೊಳ್ಳಲು ನಿರ್ಧಾರವಾಗಿತ್ತು. ಅಧೀನ ಶಾಸನ ರಚನಾ ಸಮಿತಿಯಲ್ಲಿ 14 ವಿಧಾನಸಭಾ ಸದಸ್ಯರು, 4 ವಿಧಾನಪರಿಷತ್ ಸದಸ್ಯರಿದ್ದಾರೆ. ಈ ತಂಡವು ಮೇ 9-16ರವರೆಗೆ ಉತ್ತರ ಭಾರತದ ರಾಜ್ಯಗಳಲ್ಲಿ ಅಧ್ಯಯನದ ಪ್ರವಾಸ ಕೈಗೊಳ್ಳಲಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಈ ತಂಡದಲ್ಲಿದ್ದಾರೆ.

ಇನ್ನು, ಶಾಸಕ ಕೆ.ಶಿವಮೂರ್ತಿ ನಾಯ್ಕ ಅಧ್ಯಕ್ಷತೆಯಲ್ಲಿ ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿಯ ಸದಸ್ಯರು ಮೇ 12ರಿಂದ ಅಧ್ಯಯನ ಪ್ರವಾಸ ಕೈಗೊಳ್ಳಲಿತ್ತು.

ಅಧೀನ ಶಾಸನ ರಚನಾ ಸಮಿತಿ ಸದಸ್ಯ ಶಾಸಕರ ಪಟ್ಟಿ:
ಸಿದ್ದು ಬಿ ನ್ಯಾಮಗೌಡ,
ರಾಜಶೇಖರ್​ ಬಸವರಾಜ ಪಾಟೀಲ್​,
ಎ.ಎಸ್.ಪಾಟೀಲ್​ ನಡಹಳ್ಳಿ,
ದಿನೇಶ್​ ಗುಂಡೂರಾವ್,
ಜಿ.ಹಂಪಯ್ಯ ಸಾಹುಕಾರ ಬಲ್ಲಟಗಿ,
ಎಂ.ಕೆ.ಸೋಮಶೇಖರ್​,
ಬಿ.ಸುರೇಶ್​ಗೌಡ,
ಬಿ.ಎನ್​.ವಿಜಯಕುಮಾರ್​,
ಬಿ.ಝಡ್​.ಜಮೀರ್​ ಅಹ್ಮದ್​ ಖಾನ್​,
ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕೆ.ಬಿ.ಪ್ರಸನ್ನಕುಮಾರ್​,
ಕೆ.ಬಿ.ಶಾಣಪ್ಪ,
ಸೋಮಣ್ಣ ಎಂ.ಬೇವಿನಮರದ,
ಎಂ.ನಾರಾಯಣಸ್ವಾಮಿ,
ಕಾಂತರಾಜ್​ ಬಿಎಂಎಲ್​