ಪೀಠದ ಆವರಣದಲ್ಲಿ ಟ್ರಸ್ಟ್ ವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು ಹತ್ತಾರು ಕೆಲಸಗಾರರು ಅಲ್ಲಿದ್ದಾರೆ.ಆದರೆ

ದಾವಣಗೆರೆ(ಜ.1): ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದ ಸಿದ್ದಲಿಂಗೇಶ್ವರ ಸ್ವಾಮೀಜಿ ಅಲ್ಲಿಯ ಕೆಲಸಗಾರನ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿಹರದ ಹೊರವಲಯದಲ್ಲಿರುವ ಪಂಚಮಸಾಲಿ ಪೀಠದಲ್ಲಿ ಬೀಡುಬಿಟ್ಟಿರುವ ಸ್ವಾಮೀಜಿ ಇಲ್ಲಿನ ಬೆಳವಣಿಗೆಗಳನ್ನು ಚಾಚು ತಪ್ಪದೇ ಪಂಚಮಸಾಲಿ ಟ್ರಸ್ಟ್ ಗೆ ತಿಳಿಸುತ್ತಾನೆ ಎಂಬ ಕಾರಣಕ್ಕೆ ಸ್ವಾಮೀಜಿ ಹಲ್ಲೆ ನಡೆಸಿದ್ದಾರೆ. ಕಳೆದ ಒಂದು ವರ್ಷದಿಂದ ಸ್ವಾಮೀಜಿ ಹಾಗೂ ಪಂಚಮಸಾಲಿ ಟ್ರಸ್ಟ್ ನಡುವೆ ಬಹಿರಂಗ ಸಮರವೇ ನಡೆಯುತ್ತಿದ್ದು ಸ್ವಾಮೀಜಿಯನ್ನು ಪೀಠದಿಂದ ಉಚ್ಛಾಟಿಸಲಾಗಿದೆ.ಆದರೆ ತಮ್ಮ ಉಚ್ಛಾಟನೆ ಕ್ರಮವನ್ನು ಹಲ್ಲಗಳೆದಿರುವ ಸಿದ್ದಲಿಂಗೇಶ್ವರ ಸ್ವಾಮೀಜಿ ಪಂಚಮಸಾಲಿ ಪೀಠದ ಕೊಠಡಿಯೊಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.

Add Asianetnews Kannada as a Preferred SourcegooglePreferred

ಪೀಠದ ಆವರಣದಲ್ಲಿ ಟ್ರಸ್ಟ್ ವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು ಹತ್ತಾರು ಕೆಲಸಗಾರರು ಅಲ್ಲಿದ್ದಾರೆ.ಆದರೆ ಸ್ವಾಮೀಜಿ ಚಲನವಲನಗಳ ಬಗ್ಗೆ ಟ್ರಸ್ಟ್'ಗೆ ಮಲ್ಲೇಶ್ ಎಂಬುವನು ಮಾಹಿತಿ ನೀಡುತ್ತಿದ್ದಾನೆ ಎಂದು ತಿಳಿದು ಮಠದ ಆವರಣದಲ್ಲಿ ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ನಂತರ ಕೆಳಗೆ ಬೀಳಿಸಿ ಕಾಲಿನಿಂದ ತುಳಿದಿದ್ದಾರೆಂದು ಮಲ್ಲೇಶ್ ಆರೋಪಿಸಿದ್ದಾರೆ.ಈ ಬಗ್ಗೆ ಮಲ್ಲೇಶ್ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.